ಸಿದ್ದರಾಮಯ್ಯ 
ರಾಜ್ಯ

ಕಳೆದ 5 ವರ್ಷಗಳಲ್ಲಿ 3,350ಕ್ಕೂ ಹೆಚ್ಚು ಬಾಣಂತಿಯರ ಸಾವು: ಅಂಕಿ-ಅಂಶಗಳೊಂದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಮುಖ್ಯಮಂತ್ರಿಗಳ ಕಚೇರಿ ಇಂದು ಬಾಣಂತಿಯರ ಸಾವಿನ ಬಗ್ಗೆ ಅಂಕಿ- ಅಂಶಗಳನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 3,350ಕ್ಕೂ ಹೆಚ್ಚು ಬಾಣಂತಿಯರ ಸಾವುಗಳು ಸಂಭವಿಸಿವೆ. ನಮ್ಮ ಅವಧಿಯಲ್ಲಿ ಸಾವುನೋವು ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ- ಅಂಶಗಳ ಮೂಲಕ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಇತ್ತೀಚಿನ ಬಾಣಂತಿಯರ ಸಾವಿನ ಕುರಿತು ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿ ಇಂದು ಬಾಣಂತಿಯರ ಸಾವಿನ ಬಗ್ಗೆ ಅಂಕಿ- ಅಂಶಗಳನ್ನು ಬಿಡುಗಡೆ ಮಾಡಿದೆ.

ಕಳೆದ ಐದು ವರ್ಷಗಳಲ್ಲಿ ಒಟ್ಟು 3,364 ಬಾಣಂತಿಯರು ಮೃತಪಟ್ಟಿದ್ದಾರೆ. ಅಂಕಿ-ಅಂಶಗಳ ಪ್ರಕಾರ, ಬಿಜೆಪಿ ಅಧಿಕಾರದಲ್ಲಿದ್ದಾಗ ಕೋವಿಡ್ -19 ಸಮಯದಲ್ಲಿ ಸಂಭವಿಸಿದ ಅತಿ ಹೆಚ್ಚು ತಾಯಂದಿರ ಸಾವುಗಳನ್ನು ಬಹಿರಂಗಪಡಿಸಿದೆ.

2019-2020 ರಲ್ಲಿ, 662 ತಾಯಂದಿರ ಸಾವುಗಳು ವರದಿಯಾಗಿದ್ದು, ನಂತರದ ವರ್ಷದಲ್ಲಿ ಈ ಸಂಖ್ಯೆ 714ಕ್ಕೆ ಸ್ವಲ್ಪ ಏರಿಕೆಯಾಗಿದೆ.

2021-2022 ರಲ್ಲಿ 595 ಬಾಣಂತಿಯರ ಸಾವು, 2022-2023 ರಲ್ಲಿ 527 ಮತ್ತು 2023-2024 ರಲ್ಲಿ 518 ಸಾವುಗಳು ದಾಖಲಾಗಿವೆ.

ನವೆಂಬರ್ 2024 ರ ಹೊತ್ತಿಗೆ, ರಾಜ್ಯದಲ್ಲಿ ತಾಯಂದಿರ ಸಾವಿನ ಸಂಖ್ಯೆ 348 ರಷ್ಟಿದೆ.

ಭಾನುವಾರ, ರಾಜ್ಯ ಸರ್ಕಾರ ಬಳ್ಳಾರಿ ಆಸ್ಪತ್ರೆ ಮತ್ತು ರಾಜ್ಯಾದ್ಯಂತ ಇತರ ಸ್ಥಳಗಳಲ್ಲಿ ಬಾಣಂತಿಯರ ಸಾವಿನ ಕುರಿತು ತನಿಖೆಗಾಗಿ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT