ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ವಿರೋಧ: ಮಹಾಮೇಳವ್ ನಡೆಸಿದ MES ಕಾರ್ಯಕರ್ತರು ವಶಕ್ಕೆ

ಎಂಇಎಸ್ ಮುಖಂಡ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಗಾಳೆ ಸೇರಿ 20ಕ್ಕೂ ಅಧಿಕ ಜನರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಬೆಳಗಾವಿಯಲ್ಲಿ ಪ್ರತಿ ಬಾರಿ ಅಧಿವೇಶನ ನಡೆಯುವಾಗಲೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕ್ಯಾತೆ ತೆಗೆಯುವುದು ಸಾಮಾನ್ಯವಾಗಿ ಹೋಗಿದ್ದು, ಈ ಬಾರಿಯೂ ಸಂಭಾಜಿ ವೃತ್ತದ ಬಳಿ ಮಹಾಮೇಳಾವ್ ನಡೆಸುತ್ತಿದ್ದ ಎಂಇಎಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಂಇಎಸ್ ಮುಖಂಡ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಗಾಳೆ ಸೇರಿ 20ಕ್ಕೂ ಅಧಿಕ ಜನರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಧಿವೇಶನಕ್ಕೆ ಒಂದು ದಿನ ಮುಂಚೆಯೇ ಬೆಳಗಾವಿಯಲ್ಲಿ ಮಹಾಮೇಳವ್ ನಡೆಸಲು ಎಂಇಎಸ್ ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಗೊಂದಲಗಳು ಸೃಷ್ಟಿಯಾಗುವುದನ್ನು ತಡೆಯುವ ಉದ್ದೇಶದಿಂದ ಹಾಗೂ ಮಹಾಮೇಳಾವಕ್ಕೆ ಬ್ರೇಕ್ ಹಾಕಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬೆಳಗಾವಿ ನಗರ ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಅವರು ಈ ಭಾಗದಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 9 ರಿಂದ 20 ವರೆಗೆ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಬೆಳಗಾವಿಯ ಟಿಳಕವಾಡಿ, ಕ್ಯಾಂಪ್, ಶಹಾಪೂರ, ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.

ವ್ಯಾಕ್ಸಿನ್ ಡಿಪೋ ಲೇಲೆ ಮೈದಾನ, ಧರ್ಮವೀರ ಸಂಭಾಜಿ ವೃತ್ತ, ಸಂಭಾಜಿ ಉದ್ಯಾನ ಹಾಗೂ ಶಿವಾಜಿ ಉದ್ಯಾನ ಭಾಗದಲ್ಲಿ ಮಹಾಮೇಳಾವ್ ನಡೆಸದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT