ಸದನದಲ್ಲಿ ಸಿಎಂ ಸಿದ್ದರಾಮಯ್ಯ 
ರಾಜ್ಯ

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ!

ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್ ನವರಾಗಲೀ, ಇನ್ಯಾರೇ ಆಗಲಿ ಈ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ.

ಬೆಂಗಳೂರು: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶವಾದದ್ದು. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್ ನವರಾಗಲೀ, ಇನ್ಯಾರೇ ಆಗಲಿ ಈ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು.

ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ವೊರ್ಲಿ ಕ್ಷೇತ್ರದ ಶಾಸಕ ಆದಿತ್ಯ ಠಾಕ್ರೆ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಿಂದಾಗಿ ಸಂಭ್ರಮಾಚರಣೆ ನಡೆಯುತ್ತಿದೆ. ಮತ್ತೊಂದೆಡೆ, ಬೆಳಗಾವಿಯ ಪರಿಸ್ಥಿತಿಯನ್ನು ನೋಡಿ. ನೆರೆಯ ಈ ಪ್ರದೇಶದಲ್ಲಿ ಮರಾಠಿ ಭಾಷಿಕರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಬೆಳಗಾವಿ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಮತ್ತು ಗಡಿ ವಿವಾದ ಇತ್ಯರ್ಥವಾಗೋವರೆಗು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT