ರಮ್ಯ-ಎಸ್ಎಂ ಕೃಷ್ಣ  online desk
ರಾಜ್ಯ

ಎಸ್ಎಂ ಕೃಷ್ಣಗೆ ಅಂತಿಮ ನಮನ ಸಲ್ಲಿಸಿದ ನಟಿ ರಮ್ಯ

ಸದಾಶಿವ ನಗರದಲ್ಲಿರುವ ನಿವಾಸದತ್ತ ಧಾವಿಸುತ್ತಿರುವ ಗಣ್ಯರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ನ ಮಾಜಿ ಸಂಸದೆ, ನಟಿ ರಮ್ಯ ಸಹ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ.

ಬೆಂಗಳೂರು: ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ (92) ಇಂದು ನಿಧನರಾದರು.

ಸದಾಶಿವ ನಗರದಲ್ಲಿರುವ ನಿವಾಸದತ್ತ ಧಾವಿಸುತ್ತಿರುವ ಗಣ್ಯರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ನ ಮಾಜಿ ಸಂಸದೆ, ನಟಿ ರಮ್ಯ ಸಹ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಮ್ಯಾ, ನಾನು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದಷ್ಟೇ ಹೇಳಿದರು. ಮಂಡ್ಯ ಸಂಸದೆಯಾಗಿದ್ದ ರಮ್ಯಾ, ಅವರ ರಾಜಕೀಯ ಜೀವನ ರೂಪುಗೊಂಡಿದ್ದಿದ್ದೂ ಎಸ್ಎಂ ಕೃಷ್ಣ ಅವರ ಮಾರ್ಗದರ್ಶನದಲ್ಲೇ ಎಂಬುದು ಮತ್ತೊಂದು ಗಮನಾರ್ಹ ಸಂಗತಿ.

ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!