ಬಳ್ಳಾರಿ ಬಿಮ್ಸ್ ಆಸ್ಪತ್ರೆ 
ರಾಜ್ಯ

ಬಳ್ಳಾರಿ: ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ; ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆಗೆ ದಾರಿ!

ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಂಡು ರೋಗಿಗಳಿಗೆ ಸುಲಿಗೆ ಮಾಡದಂತೆ ನೋಡಿಕೊಳ್ಳಬೇಕು.

ಬಳ್ಳಾರಿ: ಬಳ್ಳಾರಿಯ ಬಿಮ್ಸ್ (BIMS) ನಲ್ಲಿ ಒಂದು ತಿಂಗಳಲ್ಲಿಯೇ ಐವರು ಬಾಣಂತಿಯರ ಸಾವನ್ನು ಅನುಕೂಲಕರವಾಗಿ ಮಾಡಿಕೊಂಡಿರುವ ಕೆಲ ಖಾಸಗಿ ಆಸ್ಪತ್ರೆಗಳು ಗರ್ಭಿಣಿಯರ ದಾಖಲಾತಿಗೆ ದರ ಹೆಚ್ಚಿಸುವ ಮೂಲಕ ರೋಗಿಗಳನ್ನು ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

BIMS ವೈದ್ಯರು ಮತ್ತು ಸಿಬ್ಬಂದಿ ರೋಗಿಗಳಿಗೆ ನಿಷೇಧಿತ IV ದ್ರವವನ್ನು ನೀಡಿದ ನಂತರ ಐದು ಸಾವುಗಳು ಸಂಭವಿಸಿವೆ ಎಂದು ಹೇಳಲಾಗಿದೆ. ಈ ಘಟನೆ ನಂತರ ಬಿಮ್ಸ್ ಮತ್ತಿತರ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಅನೇಕ ರೋಗಿಗಳು ಕಳೆದ 15 ದಿನಗಳಿಂದ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಂಡು ರೋಗಿಗಳಿಗೆ ಸುಲಿಗೆ ಮಾಡದಂತೆ ನೋಡಿಕೊಳ್ಳಬೇಕು ಎಂದು ಗರ್ಭಿಣಿಯರ ಪೋಷಕರು ಹಾಗೂ ಸಂಬಂಧಿಕರು ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಕಂಪ್ಲಿ ನಿವಾಸಿ ನಾಗಶೇಖರ್ ರೆಡ್ಡಿ (ಹೆಸರು ಬದಲಾಯಿಸಲಾಗಿದೆ) ಐದು ಸಾವುಗಳು ವರದಿಯಾದ ನಂತರ, ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ನನ್ನ ಮಗಳನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಿದೆ.

ಈ ಹಿಂದೆ ಆ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾದ ನನ್ನ ಸಂಬಂಧಿಕರೊಬ್ಬರಿಗೆ ಸುಮಾರು 30,000 ರೂ. ಶುಲ್ಕ ವಸೂಲಿ ಮಾಡಲಾಗಿತ್ತು. ಆದರೆ ನನ್ನ ಮಗಳನ್ನು ಅದೇ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದಾಗ 50 ಸಾವಿರ ರೂ. ನೀಡುವಂತೆ ಒತ್ತಾಯಿಸಿದರು. ಆಕೆಯ ಆರೋಗ್ಯ ಕುರಿತ ಎಲ್ಲಾ ವರದಿಗಳು ಸಾಮಾನ್ಯವಾಗಿದ್ದರೂ ಅನೇಕ ಗರ್ಭಿಣಿಯರು ಆಸ್ಪತ್ರೆಯಲ್ಲಿ ದಾಖಲಾಗಿರುವುದರಿಂದ ಹಾಸಿಗೆ ಲಭ್ಯವಿಲ್ಲ ಎಂದು ಆಸ್ಪತ್ರೆಯವರು ಹೇಳುತ್ತಿದ್ದಾರೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ