ಜನಾರ್ಧನ ರೆಡ್ಡಿ ಮತ್ತು ಎಸ್ ಎಂ ಕೃಷ್ಣ 
ರಾಜ್ಯ

SM Krishna: 'ಕೆಂಪೇಗೌಡರಂತೆ ಎಸ್‌ಎಂ ಕೃಷ್ಣ ಪುತ್ಥಳಿ ನಿರ್ಮಾಣ ಮಾಡಿ'- ಗಾಲಿ ಜನಾರ್ಧನ ರೆಡ್ಡಿ

ಕೆಂಪೇಗೌಡರು ಬೆಂಗಳೂರು ಕಟ್ಟಿದ್ರು. ಎಸ್ ಎಂ ಕೃಷ್ಣ ಆಧುನಿಕ ಬೆಂಗಳೂರು ಮಾಡಿದ್ರು. ಕೆಂಪೇಗೌಡರ ಪ್ರತಿಮೆ ಅಂತರಾಷ್ಟ್ರೀಯ ನಿಲ್ದಾಣದ ಬಳಿ ನಿರ್ಮಾಣವಾಗಿದೆ...

ಬೆಂಗಳೂರು: ಕರ್ನಾಟಕಕ್ಕೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಕೊಡುಗೆ ಅಪಾರವಾಗಿದ್ದು, ಕೆಂಪೇಗೌಡರಂತೆ ಅವರ ಪುತ್ಥಳಿಯನ್ನೂ ನಿರ್ಮಾಣ ಮಾಡಬೇಕು ಎಂದು ಬಿಜೆಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇಂದು ಇಹಲೋಕ ತ್ಯಜಿಸಿದ ಎಸ್ ಎಂ ಕೃಷ್ಣ ಅವರಿಗೆ ಸಂತಾಪ ಸೂಚಿಸಿರುವ ಜನಾರ್ಧನ ರೆಡ್ಡಿ, 'ಕೆಂಪೇಗೌಡರು ಬೆಂಗಳೂರು ಕಟ್ಟಿದ್ರು. ಎಸ್ ಎಂ ಕೃಷ್ಣ ಆಧುನಿಕ ಬೆಂಗಳೂರು ಮಾಡಿದ್ರು. ಕೆಂಪೇಗೌಡರ ಪ್ರತಿಮೆ ಅಂತರಾಷ್ಟ್ರೀಯ ನಿಲ್ದಾಣದ ಬಳಿ ನಿರ್ಮಾಣವಾಗಿದೆ. ಅದೇ ರೀತಿ ಎಸ್‌ ಎಂ ಕೃಷ್ಣ ಅವ ಪುತ್ಥಳಿ ನಿರ್ಮಿಸಬೇಕು. ಆಗ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ' ಎಂದು ಹೇಳಿದ್ದಾರೆ.

‘ಕರ್ನಾಟದ ಮುಖ್ಯಮಂತ್ರಿಗಳಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಹಾಗೂ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ಎಸ್​​.ಎಂ.ಕೃಷ್ಣ ರವರ ನಿಧನದ ಸುದ್ದಿ ದುಃಖ ತರಿಸಿದೆ.

ಸನ್ಮಾನ್ಯ ಎಸ್.ಎಂ ಕೃಷ್ಣರವರು ರಾಜ್ಯದಲ್ಲಿ ಮೋಡ ಬಿತ್ತನೆ, ಐಟಿ ಕ್ಯಾಪಿಟಲ್ ಗರಿಯ ಹಿಂದಿನ ರೂವಾರಿಗಳಾಗಿ, ಇಸ್ಕಾಂ ರಚನೆಯ ಮೂಲಕ ವಿದ್ಯುತ್ ಕ್ರಾಂತಿ ಸೃಷ್ಟಿಸಿ, ಕೃಷಿ ಡಿಜಿಟಲೀಕರಣದ ಪಿತಾಮಹರಾಗಿ, ಹೊಸ ಕಾರ್ಮಿಕ ನೀತಿ ರೂಪಿಸಿ, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ಪರಿಚಯಿಸಿದ, ಆಧುನಿಕ ದೂರದೃಷ್ಟಿಯ ನಾಯಕರಾಗಿ ಅಂದಿನ ಇಂದಿನ ಪೀಳಿಗೆಯ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ, ನಾಡಿಗೆ ಅಪಾರ ಕೊಡುಗೆ ನೀಡಿರುವ ಧೀಮಂತ ನಾಯಕರಾಗಿದ್ದಾರೆ.

ನಾನು ಈ ರಾಜ್ಯದ ಪ್ರವಾಸೋದ್ಯಮ ಸಚಿವನಾಗಿದ್ದ ಸಂದರ್ಭದಲ್ಲಿ 500 ವರ್ಷದ ಶ್ರೀ ಕೃಷ್ಣದೇವರಾಯರ ಪಟ್ಟಾಭಿಷೇಕ ಮಹೋತ್ಸವದ ಕಾರ್ಯಕ್ರಮವನ್ನು ಹಂಪಿ ಮಾತ್ರವಲ್ಲದೆ ದೆಹಲಿಯಲ್ಲೂ ಕಾರ್ಯಕ್ರಮ ಆಯೋಜಿಸಿದ್ದೆ. ಆ ಸಂದರ್ಭದಲ್ಲಿ ಕೇಂದ್ರ ಸಚಿವರಾಗಿದ್ದ ಸನ್ಮಾನ್ಯ ಎಸ್.ಎಂ ಕೃಷ್ಣ ಅವರು ಉದ್ಘಾಟಕರಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಾಲ್ಕು ಗಂಟೆಗಳ ಕಾಲ ಕಾರ್ಯಕ್ರಮವನ್ನು ನನ್ನೊಟ್ಟಿಗೆ ವೀಕ್ಷಣೆ ಮಾಡಿದ್ದು ಎಂದು ಮರೆಯಲಾಗದು. ಅವರ ರಾಜಕೀಯ ಅನುಭವಗಳನ್ನು ನನ್ನೊಟ್ಟಿಗೆ ಹಂಚಿಕೊಂಡ ಕ್ಷಣಗಳು ಜನ ಸೇವೆಯಲ್ಲಿ ತೊಡಗಿರುವ ನನಗೆ ಮಾರ್ಗದರ್ಶನದ ನುಡಿಗಳಾಗಿವೆ.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ‘ ಎಂದು ಜನಾರ್ಧನ ರೆಡ್ಡಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Women World Cup 2025: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ವಿರೋಚಿತ ಸೋಲು; ಸೆಮಿಸ್‌ಗಾಗಿ ಕಿವೀಸ್ ಜೊತೆ ಸೆಣೆಸಾಟ!

ಮುಸ್ಲಿಂ ಯುವಕರನ್ನು ಮದುವೆಯಾದರೆ ಅಂತಹ ಮಗಳ ಕಾಲು ಮುರಿಯಿರಿ: ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ: ರಮೇಶ್ ಕತ್ತಿಗೆ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲು!

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ 1,950 ಕೋಟಿ ರೂ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ!

News headlines 19-10-2025 | ಖರ್ಗೆ ತವರಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ; ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಹೊಡೆದಾಟ; DK Shivakumar- Kiran Majumdar ನಡುವೆ ನಿಲ್ಲದ ವಾಕ್ಸಮರ

SCROLL FOR NEXT