ಲೋಕಾಯುಕ್ತರು ವಶಕ್ಕೆ ಪಡೆದ ನಗದು, ಚಿನ್ನಾಭರಣ ಚಿತ್ರ 
ರಾಜ್ಯ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಕಲಬುರಗಿ, ರಾಯಚೂರು, ಗದಗ, ಹಾಗೂ ಚಿತ್ರದುರ್ಗದಲ್ಲಿ ದಾಳಿ ನಡೆದಿದೆ.

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಆರೋಗ್ಯ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಗ್ಗೆಯಿಂದಲೇ ದಾಳಿ ನಡೆಸಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಕಲಬುರಗಿ, ರಾಯಚೂರು, ಗದಗ, ಹಾಗೂ ಚಿತ್ರದುರ್ಗದಲ್ಲಿ ದಾಳಿ ನಡೆದಿದೆ.

ಬೆಂಗಳೂರಿನ ಬೆಸ್ಕಾಂ ಸೂಪರಿಂಟೆಂಡೆಂಟ್ ಎಂಜಿನಿಯರ್ (ಎಲೆಕ್ಟ್ರಿಕಲ್ ) ಲೋಕೇಶ್ ಬಾಬು, ಬಿಬಿಎಂಪಿ ವಸಂತಪುರ ವಾರ್ಡ್ ಸಂಖ್ಯೆ 197ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್ ಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯ ಡಿಎಫ್ ಪಿ ನಂಜುಂಡಯ್ಯ, ಗದಗ್ ನ ಇಇ ಕಚೇರಿಯ ಎಸ್ ಡಿ ಎ ಲಕ್ಷ್ಮಣ್, ಕಲಬುರಗಿ ಮಹಾನಗರ ಪಾಲಿಕೆ ಸಹಾಯಕ ಆಯುಕ್ತ ರಾಮಪ್ಪ ಅವರ ಮನೆ ಹಾಗೂ ಫಾರ್ಮ್ ಹೌಸ್, ರಾಯಚೂರಿನ ಅಬಕಾರಿ ನಿರೀಕ್ಷಕ ರಮೇಶ್ ಅಗಡಿ, ಚಿತ್ರದುರ್ಗದ ಹಿರಿಯೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಮನೆ ಮೇಲೂ ದಾಳಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!