ಸಂಗ್ರಹ ಚಿತ್ರ 
ರಾಜ್ಯ

ಬಳ್ಳಾರಿ ಮಹಾನಗರ ಪಾಲಿಕೆ ಭ್ರಷ್ಟಾಚಾರ: ಲೋಕಾಯುಕ್ತಕ್ಕ ದೂರು ನೀಡಲು BJP ಮುಂದು

ಪಾಲಿಕೆಯ ವಿರೋಧ ಪಕ್ಷದ ನಾಯಕ ಸಿ.ಎಂ.ಇಬ್ರಾಹಿಂ ಬಾಬು ಅವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸೋಮವಾರ ಬಿಡುಗಡೆ ಮಾಡಿದರು.

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಪಾಲಿಕೆಯ ವಿರೋಧ ಪಕ್ಷದ ನಾಯಕ ಸಿ.ಎಂ.ಇಬ್ರಾಹಿಂ ಬಾಬು ಅವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸೋಮವಾರ ಬಿಡುಗಡೆ ಮಾಡಿದರು, ಕೆಲವು ಸಿಬ್ಬಂದಿ 2 ಕೋಟಿ ರೂಪಾಯಿ ಮೌಲ್ಯದ ನಕಲಿ ವಿದ್ಯುತ್ ಬಿಲ್‌ಗಳನ್ನು ಸೃಷ್ಟಿಸಿದ್ದಾರೆಂದು ಇಬ್ರಾಹಿಂ ಅವರು ಆರೋಪಿಸಿದರು.

ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಕೆಲವು ಅಧಿಕಾರಿಗಳು ಕಳೆದ ಒಂದು ವರ್ಷದಲ್ಲಿ ಮಹಾನಗರ ಪಾಲಿಕೆ ಕಾಮಗಾರಿಯಲ್ಲಿ 15 ಕೋಟಿ ರೂ. ಭ್ರಷ್ಟಾಚಾರ ನಡೆಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ಲೋಕಾಯುಕ್ತಕ್ಕೆ ಬಿಜೆಪಿ ದೂರು ನೀಡಲಿದೆ ಎಂದು ಹೇಳಿದರು.

ಇದಲ್ಲದೆ, ‘ತೆರಿಗೆ ವಸೂಲಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಪಾಲಿಕೆಯಲ್ಲಿನ ಬಹುಮತ ಬಳಸಿಕೊಂಡು ಕಾಂಗ್ರೆಸ್ ಮೇಯರ್ ಮತ್ತು ಕಾರ್ಪೊರೇಟರ್‌ಗಳು ಬಳ್ಳಾರಿ ನಗರವನ್ನು ಅಭಿವೃದ್ಧಿಪಡಿಸುವ ಬದಲು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಬಳ್ಳಾರಿ ನಗರ ಪಾಲಿಕೆ ವ್ಯಾಪ್ತಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದು, 1.20 ಲಕ್ಷ ಜನರು ಪಾಲಿಕೆಗೆ ತೆರಿಗೆ ಪಾವತಿಸುತ್ತಿದ್ದಾರೆ. ಆದರೆ, ಭ್ರಷ್ಟಾಚಾರದಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ.

ಕಳೆದ ಎರಡು ವರ್ಷಗಳಿಂದ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ವಿರೋಧ ಪಕ್ಷವಾಗಿ, ಆಡಳಿತ ಮಂಡಳಿಯ ಭ್ರಷ್ಟಾಚಾರಗಳನ್ನು ನಾವು ಖಂಡಿಸಿದ್ದೇವೆ. ಇತ್ತೀಚೆಗಷ್ಟೇ ಕೆಲವು ಮಾಲೀಕರು ವಿದ್ಯುತ್ ಬಿಲ್ ಪಾವತಿ ರಸೀದಿ ಸಮೇತ ಪಾಲಿಕೆಗೆ ಬಂದಿದ್ದರು. ನಂತರ, ಈ ವೇಳೆ ಅಧಿಕಾರಿಗಳು ನಕಲಿ ಬಿಲ್‌ಗಳನ್ನು ಸೃಷ್ಟಿಸಿರುವುದು ಬಯಲಾಗಿದೆ. ಸಾಕಷ್ಟು ಮಂದಿ ಮನೆ ಮಾಲಿಕರು ದಂಡದ ಜೊತೆಗೆ ಬಿಲ್ ಗಳನ್ನು ಪಡೆದಿದ್ದಾರೆ. ತೆರಿಗೆ ಸಂಗ್ರಹದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕಾಂಗ್ರೆಸ್ ಕೂಡ ಸರಿಯಾದ ವಿವರಣೆ ನೀಡಿಲ್ಲ.

ಪಾಲಿಕೆಯಿಂದ ಪ್ರತಿ ವರ್ಷ ಸುಮಾರು 40 ಕೋಟಿ ತೆರಿಗೆ ಸಂಗ್ರಹವಾಗುತ್ತಿದ್ದರೂ ಕಳೆದ ಕೆಲವು ಸಭೆಗಳಲ್ಲಿ ತೆರಿಗೆ ಸಂಗ್ರಹದ ಬಗ್ಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಇದು ಭ್ರಷ್ಟಾಚಾರ ನಡೆದಿರುವುದನ್ನು ಬಹಿರಂಗಪಡಿಸಿದೆ. ಶೀಘ್ರದಲ್ಲೇ ಲೋಕಾಯುಕ್ತ ಅಧಿಕಾರಿಗಳನ್ನು ಭೇಟಿ ಮಾಡಿ ಎಲ್ಲ ದಾಖಲೆಗಳನ್ನು ಸಲ್ಲಿಸುತ್ತೇವೆ. ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುವ ಬದಲು ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಮುಂಬರುವ ಕೌನ್ಸಿಲ್ ಸಭೆಯಲ್ಲಿ ಮೇಯರ್ ಅವರ ಭ್ರಷ್ಟಾಚಾರವನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

SCROLL FOR NEXT