ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  
ರಾಜ್ಯ

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತ್ನಾಳ್ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ತಮ್ಮ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರುದ್ದು ಕೋರಿ ಬಿಜೆಪಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು.

ಬೆಂಗಳೂರು: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರುದ್ದು ಕೋರಿ ಬಿಜೆಪಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು. ಇಂದು ಎಫ್ಐಆರ್ ರದ್ದುಗೊಳಿಸಿ ತೀರ್ಪು ನೀಡಿದೆ.

ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

"ರಾಹುಲ್‌ ಗಾಂಧಿ ವಿದೇಶದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಅರ್ಜಿದಾರರು ಹೇಳಿಕೆ ನೀಡಿದ್ದಾರೆ. ಆದರೆ, ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿರುವ ಯಾವುದೇ ಆರೋಪ ಸಂಬಂಧಿತ ಅಂಶಗಳು ಇಲ್ಲ. ನಮ್ಮ ಕಕ್ಷಿದಾರರ ಹೇಳಿಕೆಗೆ ಸಂಬಂಧಿಸಿದಂತೆ ಅಸಮಾಧಾನವಾಗಿದ್ದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಬಹುದಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಲಾಗುವುದು" ಎಂದು ಯತ್ನಾಳ್ ಪರ ವಕೀಲರು ವಾದಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

SCROLL FOR NEXT