ಎಸ್ ಎಂ ಕೃಷ್ಣ 
ರಾಜ್ಯ

SM ಕೃಷ್ಣ ಗೌರವಾರ್ಥ ಪ್ರಶಸ್ತಿ ನೀಡಿ - ಸ್ಮಾರಕ ನಿರ್ಮಿಸಿ: ಸರ್ಕಾರಕ್ಕೆ ಪಕ್ಷಾತೀತವಾಗಿ ರಾಜಕಾರಣಿಗಳ ಒತ್ತಾಯ

ರಾಜ್ಯದ ವಿಶೇಷವಾಗಿ ಬೆಂಗಳೂರಿನ ಬೆಳವಣಿಗೆಗೆ ಕೃಷ್ಣ ಅವರ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿ ನೀಡಬೇಕು. ಕೃಷ್ಣ ಅವರು ದೂರದೃಷ್ಟಿಯ ನಾಯಕರಾಗಿದ್ದರು.

ಬೆಂಗಳೂರು: ಮಂಗಳವಾರ ಮುಂಜಾನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಗೌರವಾರ್ಥ ಪ್ರಶಸ್ತಿಗಳನ್ನು ಸ್ಥಾಪಿಸಬೇಕು ಮತ್ತು ಸ್ಮಾರಕವನ್ನು ನಿರ್ಮಿಸಬೇಕು ಎಂದು ರಾಜಕಾರಣಿಗಳು ರಾಜ್ಯ ಸರ್ಕಾರವನ್ನು ಪಕ್ಷಾತೀತವಾಗಿ ಒತ್ತಾಯಿಸಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ರಾಜ್ಯದ ವಿಶೇಷವಾಗಿ ಬೆಂಗಳೂರಿನ ಬೆಳವಣಿಗೆಗೆ ಕೃಷ್ಣ ಅವರ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿ ನೀಡಬೇಕು. ಕೃಷ್ಣ ಅವರು ದೂರದೃಷ್ಟಿಯ ನಾಯಕರಾಗಿದ್ದರು, ಬೆಂಗಳೂರನ್ನು ಜಾಗತಿಕ ಐಟಿ ನಕ್ಷೆಯಲ್ಲಿ ಇರಿಸಲು ಅವರ ಪ್ರಯತ್ನಗಳು ಶ್ಲಾಘನೀಯ ಎಂದು ಅವರು ಹೇಳಿದರು.

ವಿಕಾಸ ಸೌಧ ಆವರಣದಲ್ಲಿ ಕೃಷ್ಣ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ. ಎಸ್.ಎಂ ಕೃಷ್ಣಅವರಿಂದಲೇ ವಿಕಾಸ ಸೌಧ ಅಸ್ತಿತ್ವಕ್ಕೆ ಬಂದಿದೆ ಎಂದರು. ಕೃಷಿ ಸಚಿವ ಎನ್ ಚಲುವರಾಯ ಸ್ವಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಬೆಂಗಳೂರಿನ ಉದ್ದೇಶಿತ ‘ನಾಲೆಡ್ಜ್ ಸಿಟಿ’ಗೆ ಕೃಷ್ಣ ಹೆಸರಿಡಲು ಕ್ರಮಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ. ಬಿಬಿಎಂಪಿ ಕೆಂಪೇಗೌಡರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ. ಬೆಂಗಳೂರಿನ ಬೆಳವಣಿಗೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ಅಧಿಕಾರಿಗಳು ಅಥವಾ ನಾಗರಿಕರಿಗೆ ಕೃಷ್ಣನ ಗೌರವಾರ್ಥ ಪ್ರಶಸ್ತಿಯನ್ನು ಸಹ ಇದು ಸ್ಥಾಪಿಸಬೇಕು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರ ನವರಾತ್ರಿ ದಿನ ಜಾರಿ

GST 2.0: ಯಾವುದಕ್ಕೆ ತೆರಿಗೆ, ಯಾವುದಕ್ಕೆ ವಿನಾಯಿತಿ ಇಲ್ಲಿದೆ ಮಾಹಿತಿ...

ಮುಖ್ಯಮಂತ್ರಿ ಹುದ್ದೆಯಿಂದ ಫಡ್ನವೀಸ್ ಗೆ ಕೊಕ್: ರಾಷ್ಟ್ರ ರಾಜಕಾರಣಕ್ಕೆ 'ಮಹಾ'ಸಿಎಂ; ಬಿಜೆಪಿ ರಾಷ್ಟ್ರಾಧ್ಯಕ್ಷ ರೇಸ್ ನಲ್ಲಿ ರೂಪಾಲಾ !

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

SCROLL FOR NEXT