ಆರ್. ಅಶೋಕ್ 
ರಾಜ್ಯ

SM ಕೃಷ್ಣ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ನೀಡಲು ಸರ್ಕಾರಕ್ಕೆ ಆರ್.ಅಶೋಕ್ ಮನವಿ

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್‌.ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಕರ್ನಾಟಕ ರತ್ನ' (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ರಾಜ್ಯ ರಾಜಕಾರಣದ ಧೀಮಂತ ನಾಯಕ ಎಸ್‌.ಎಂ.ಕೃಷ್ಣ ಅವರು ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆ ಬಳಲುತ್ತಿದ್ದ ಅವರು ಮಂಗಳವಾರ ನಿಧನರಾಗಿದ್ದು, ಇಂದು ಬುಧವಾರ (ಡಿ.11) ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT