ರಂಜಿತ್ ಬಲ್ಲಾಳ್ 
ರಾಜ್ಯ

ಉಡುಪಿ: ಅಪಘಾತದಲ್ಲಿ ಕಾರು ರೇಸಿಂಗ್ ಚಾಂಪಿಯನ್ ಸಾವು

ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ ಹಿಂದೆ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದ ರಂಜಿತ್ ಬೈಕ್ ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ.

ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ ಹಿಂದೆ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದ ರಂಜಿತ್ ಬೈಕ್ ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಸೋಮವಾರ ಸಂಜೆ 4-30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ರಂಜಿತ್ ಕಾರು ರೇಸಿಂಗ್ ನಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದರು.

ಪ್ರತಿಭಾವಂತರಾಗಿದ್ದ ರಂಜಿತ್ ನೂರಕ್ಕೂ ಹೆಚ್ಚು ಟ್ರೋಫಿಗಳನ್ನು ಗೆದ್ದಿದ್ದರು. ಆಟೋ ಕ್ರಾಸ್ ಹಿಲ್ ಕ್ಲೈಂಬ್ ನಲ್ಲಿ ಅತ್ಯಂತ ವೇಗದ ಚಾಲಕರಾಗಿಯೂ ಹೊರಹೊಮ್ಮಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT