ಬಂಧಿತ ಆರೋಪಿ 
ರಾಜ್ಯ

ಮಂಗಳೂರು: ಡ್ರಗ್ಸ್ ವಿರೋಧಿ ಕಾರ್ಯಾಚರಣೆ; 6.7 ಕೆಜಿ ಗಾಂಜಾ ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಖಚಿತ ಮಾಹಿತಿ ಮೇರೆಗೆ ಮಂಗಳೂರು ಬಳಿಯ ಮೂಲ್ಕಿ- ಬಾಪ್ಪನಾಡು ಪ್ರದೇಶದಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅಖಿಲೇಶ್ (30) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಮಂಗಳೂರು: ಡ್ರಗ್ಸ್ ಮುಕ್ತ ಮಂಗಳೂರಿಗೆ ಪೊಲೀಸರು ದಿಟ್ಟ ಹೆಜ್ಜೆ ಇರಿಸಿದ್ದಾರೆ. ನಿಷೇಧಿತ ಮಾದಕ ವಸ್ತು ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, 6.7 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮಂಗಳೂರು ಬಳಿಯ ಮೂಲ್ಕಿ- ಬಾಪ್ಪನಾಡು ಪ್ರದೇಶದಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅಖಿಲೇಶ್ (30) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ವಿದ್ಯಾರ್ಥಿಗಳು ಸೇರಿದಂತೆ ಜನರಿಗೆ ಮಾರಾಟ ಮಾಡುವ ಉದ್ದೇಶದಿಂದ ಅಖಿಲೇಶ್ ಮುಂಬೈಯಿಂದ ಮಂಗಳೂರಿಗೆ ಗಾಂಜಾ ತರಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ ರೂ. 1.62 ಲಕ್ಷ ಮೌಲ್ಯದ 6.7 ಕೆಜಿ ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ರೂ. 660 ನಗದು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈನಿಂದ ಗಾಂಜಾ ತರಿಸಿಕೊಡಿದ್ದಆರೋಪಿ ಮಂಗಳೂರಿಗೆ ರೈಲಿನಲ್ಲಿ ತೆರಳಿ ಸಾಕಷ್ಟು ಹಣವಿದ್ದು, ಲಕ್ಸುರಿ ಜೀವನ ನಡೆಸುತ್ತಿರುವಂತಹ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಂಧಿತ ಆರೋಪಿ ವಿರುದ್ಧ ಕಳ್ಳತನ, ಡ್ರಗ್ ಸಾಗಾಟ, ಹಲ್ಲೆ ಸೇರಿದಂತೆ ಆರು ಕ್ರಿಮಿನಲ್ ಕೇಸ್ ಗಳು ಮಂಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕ್ ಭದ್ರತಾ ಪಡೆ ಪ್ರಧಾನ ಕಚೇರಿ ಹೊರಗೆ ಕಾರ್ ಬಾಂಬ್ ಸ್ಫೋಟ; ಕನಿಷ್ಠ 10 ಮಂದಿ ಸಾವು

ಉಚಿತ ಔಷಧ ಯೋಜನೆ: ಕೆಮ್ಮಿನ ಸಿರಪ್ ಸೇವಿಸಿದ್ದ 5 ವರ್ಷದ ಬಾಲಕ ಸಾವು, ಮತ್ತೊಂದು ಮಗು ಸ್ಥಿತಿ ಗಂಭೀರ!

ಲಡಾಖ್ ಜನರಿಗೆ ಮೋದಿ 'ದ್ರೋಹ'; ಪೊಲೀಸ್ ಗುಂಡಿನ ದಾಳಿ ಬಗ್ಗೆ ನ್ಯಾಯಾಂಗ ತನಿಖೆಗೆ ರಾಹುಲ್ ಆಗ್ರಹ

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ

Dharmasthala Case: ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ SITಗೆ ನಿರ್ದೇಶನ: ಸಚಿವ ಜಿ ಪರಮೇಶ್ವರ

SCROLL FOR NEXT