ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಬಂಧ; ಬಾಲಕಿಗೆ ಮಗು ಜನಿಸಿದ ನಂತರ ದೂರು ಕೊಟ್ಟ ತಂದೆ!

ವಿಜಯ್ ಕುಮಾರ್ ಮದುವೆಯಾಗುವುದಾಗಿ ಭರವಸೆ ನೀಡಿ ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದರು. ಡಿಸೆಂಬರ್ 10 ರಂದು ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ ಆರೋಪದ ಮೇಲೆ ಬೆಂಗಳೂರು ವಿಮಾನ ನಿಲ್ದಾಣದ ಡ್ಯೂಟಿ ಫ್ರೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 20 ವರ್ಷದ ಎಲ್ ವಿಜಯ್ ಕುಮಾರ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ವಿಜಯ್ ಕುಮಾರ್ ಮದುವೆಯಾಗುವುದಾಗಿ ಭರವಸೆ ನೀಡಿ ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದರು. ಡಿಸೆಂಬರ್ 10 ರಂದು ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಆಕೆಯ ತಂದೆ ಕೆಂಪೇಗೌಡ ವಿಮಾನ ನಿಲ್ದಾಣದ ಪೊಲೀಸರಿಗೆ ದೂರು ನೀಡಿದ್ದಾರೆ.

ಎಫ್‌ಐಆರ್ ಪ್ರಕಾರ, ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ವಿಜಯ್ ಕುಮಾರ್ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಮೂರು ಹೆಣ್ಣು ಮಕ್ಕಳಲ್ಲಿ ಎರಡನೆಯವಳಾದ ಈ ಬಾಲಕಿ ಇತ್ತೀಚೆಗೆ ದೇವನಹಳ್ಳಿಯ ಸ್ಥಳೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯು ಮುಗಿಸಿದ್ದಳು.

“ಕಳೆದ ಕೆಲವು ದಿನಗಳಿಂದ ತನ್ನ ಮಗಳು ಹೊಟ್ಟೆ ನೋವು ಎಂದು ಹೇಳುತ್ತಿದ್ದಳು. ಡಿಸೆಂಬರ್ 9 ರಂದು ನೋವು ಉಲ್ಬಣಗೊಂಡ ನಂತರ ಮನೆಯವರು ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆ ಮಗಳು ಗರ್ಭಿಣಿಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಂದೆ ಹೇಳಿದ್ದಾರೆ.

ಇದರಿಂದ ಗಾಬರಿಗೊಂಡ ಪೋಷಕರು ಮಗಳನ್ನು ವಿಚಾರಿಸಿದಾಗ ಆಕೆ ಒಬ್ಬಳೇ ಇದ್ದಾಗ ವಿಜಯ್ ಕುಮಾರ್ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಹೇಳಿದ್ದಾರೆ. “ತನ್ನ ವಿರೋಧದ ಹೊರತಾಗಿಯೂ, ಕುಮಾರ್ ಮದುವೆಯಾಗುವುದಾಗಿ ಭರವಸೆ ನೀಡಿ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದುವಂತೆ ಮನವೊಲಿಸಿದ್ದ ಎಂದು ಬಾಲಕಿ ಹೇಳಿದ್ದಾಳೆ.

ಬಾಲಕಿಯನ್ನು ದೇವನಹಳ್ಳಿಯ ಯರ್ತಿಗಾನಹಳ್ಳಿಯಲ್ಲಿರುವ ಓಂ ಶಕ್ತಿ ದೇವಸ್ಥಾನದ ಬಳಿಯ ಶೆಡ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವರ್ಷದ ಫೆಬ್ರವರಿ 10 ರಂದು ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿ ಕುಮಾರ್ ವಿರುದ್ಧ ಪೋಸ್ಕೊ ಕಾಯಿದೆಯ ಸೆಕ್ಷನ್ 4 ಮತ್ತು 6 ಮತ್ತು ಐಪಿಸಿ ಸೆಕ್ಷನ್ 376 (2) (ಎನ್) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT