ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ಗಾಳಿಬೀಡು ಪಂಚಾಯಿತಿ ಅಧ್ಯಕ್ಷೆ ಉಷಾ ಬಿಜಿ ಮತ್ತು ಪಿಡಿಒ ಕೆಎ ಶಶಿ ಕಿರಣ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. 
ರಾಜ್ಯ

ಕೊಡಗಿನ ಗಾಳಿಬೀಡು ಗ್ರಾಮ ಪಂಚಾಯಿತಿಗೆ ರಾಷ್ಟ್ರ ಪ್ರಶಸ್ತಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ಗಾಳಿಬೀಡು ಪಂಚಾಯಿತಿ ಅಧ್ಯಕ್ಷೆ ಉಷಾ ಬಿಜಿ ಮತ್ತು ಪಿಡಿಒ ಕೆಎ ಶಶಿ ಕಿರಣ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಪಂಚಾಯಿತಿಗೆ ಪ್ರತಿಷ್ಠಿತ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸ್ಟೇಟ್ ವಿಕಾಸ್ ಪುರಸ್ಕಾರ್ ಪ್ರಶಸ್ತಿ ಲಭಿಸಿದ್ದು, ಈ ಮೂಲಕ ದೇಶದ ಪ್ರಮುಖ ಮೂರು ಪಂಚಾಯಿತಿಗಳಲ್ಲಿ ಒಂದಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ಗಾಳಿಬೀಡು ಪಂಚಾಯಿತಿ ಅಧ್ಯಕ್ಷೆ ಉಷಾ ಬಿಜಿ ಮತ್ತು ಪಿಡಿಒ ಕೆಎ ಶಶಿ ಕಿರಣ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

''ಹಲವು ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಹಿನ್ನೆಲೆಯಲ್ಲಿ ಗಾಳಿಬೀಡು ಪಂಚಾಯತ್‌ಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಪಂಚಾಯಿತಿಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲಾಗುವುದು ಎಂದು ಗಾಳಿಬೀಡು ಪಂಚಾಯಿತಿ ಪಿಡಿಒ ಶಶಿ ಕಿರಣ ಅವರು ಹೇಳಿದ್ದಾರೆ.

ತನ್ನ ವ್ಯಾಪ್ತಿಯಲ್ಲಿ ಒಟ್ಟು ಹತ್ತು ಗ್ರಾಮಗಳನ್ನು ಹೊಂದಿರುವ ಗಾಳಿಬೀಡು ಪಂಚಾಯತ್, ಸರ್ಕಾರದ ವಿವಿಧ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ.

ಬಡತನ ನಿರ್ಮೂಲನೆ ಮತ್ತು ಸುಧಾರಿತ ಜೀವನೋಪಾಯ ಪಂಚಾಯಿತಿ ವಿಭಾಗದಲ್ಲಿ ಗಾಳಿಬೀಡು ಪಂಚಾಯಿತಿಗೆ ಈ ಪ್ರಶಸ್ತಿ ಬಂದಿದ್ದು, ಇದು 1 ಕೋಟಿ ರೂಪಾಯಿ ನಗದು ಬಹುಮಾನ ಒಳಗೊಂಡಿದೆ.

ಸರ್ಕಾರಿ ಶಾಲೆಗಳಲ್ಲಿ ಉದ್ಯಾನವನ ಸ್ಥಾಪನೆ, ಪಂಚಾಯಿತಿ ವ್ಯಾಪ್ತಿಯಲ್ಲಿ ಶೌಚಾಲಯ ವ್ಯವಸ್ಥೆ, ಬಡತನ ನಿರ್ಮೂಲನೆ, ನೀರಾವರಿ ಕೆರೆಗಳ ಸ್ಥಾಪನೆ, ಪೌಷ್ಠಿಕ ಆಹಾರ ಪೂರೈಕೆಯೊಂದಿಗೆ ಅಂಗನವಾಡಿ ಅಭಿವೃದ್ಧಿ, ಪಿಂಚಣಿ ಯೋಜನೆಗಳ ಅನುಷ್ಠಾನ ಸೇರಿದಂತೆ ಪಂಚಾಯಿತಿಯು ವಿವಿಧ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT