ಮಾಜಿ ಸಚಿವ ಎಚ್ ಆಂಜನೇಯ 
ರಾಜ್ಯ

SC/ST Reservation: ಒಳಮೀಸಲಾತಿ ಕುರಿತ ಅಪಪ್ರಚಾರಕ್ಕೆ ಕಿವಿಗೊಡಬೇಡಿ; ಸಮುದಾಯದವರಿಗೆ ಕಾಂಗ್ರೆಸ್ ನಾಯಕರ ಮನವಿ

ಸರಕಾರ ಒಳಮೀಸಲಾತಿ ಜಾರಿಗೆ ತರಲು ಬದ್ಧವಾಗಿದ್ದು, ದಶಕಗಳ ಕಾಲ ನಿರಂತರ ಹೋರಾಟ ನಡೆಸಿದ ಮಾದಿಗ ಸಮುದಾಯದವರು ಇನ್ನೆರಡು ತಿಂಗಳು ತಾಳ್ಮೆಯಿಂದ ಇರಬೇಕು.

ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ವರದಿ ಸಲ್ಲಿಸಿದ ಕೂಡಲೇ ಒಳಮೀಸಲಾತಿಯನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಹೀಗಾಗಿ ಸಮುದಾಯ ಯಾರೊಬ್ಬರು ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಪರಿಶಿಷ್ಟ ಜಾತಿ ಎಸ್‌ಸಿ (ಎಡ) ಸಮುದಾಯದ ನಾಯಕರು ಮನವಿ ಮಾಡಿಕೊಂಡಿದ್ದಾರೆ.

ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ ಅವರು, ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರದ ಬಳಿ ದತ್ತಾಂಶ ಲಭ್ಯವಿಲ್ಲ ಎಂದು ಹೇಳುವ ಮೂಲಕ ಕೆಲವರು ಸಮುದಾಯ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಸರ್ಕಾರವು 2011 ರ ಜನಗಣತಿ ದತ್ತಾಂಶವನ್ನು ಪರಿಗಣಿಸುವ ಅವಕಾಶವಿದೆ. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗವು ಸಂಗ್ರಹಿಸಿದ ಮಾಹಿತಿಯನ್ನು ಸಹ ಪರಿಗಣಿಸಬಹುದು. ಮೇಲಾಗಿ, ಕಾಂತರಾಜು ಆಯೋಗದ ಜಾತಿ ಗಣತಿ ವರದಿಯಲ್ಲಿ ಅಂಕಿಅಂಶಗಳು ಕೂಡ ಲಭ್ಯವಿವೆ. ಸರ್ಕಾರವು ಈ ವರದಿಯನ್ನು ಒಪ್ಪಿಕೊಂಡಿದ್ದೇ ಆದರೆ, ಒಳ ಮೀಸಲಾತಿಯನ್ನು ಜಾರಿಗೆ ತರಬಹುದು ಎಂದು ಹೇಳಿದರು.

ನಾಗಮೋಹನ್ ದಾಸ್ ಅವರ ಆಯೋಗವೇ ಬೇಡ ಎಂದು ಅನೇಕರು ವಾದ ಮಾಡುತ್ತಿದ್ದಾರೆ. ಪರಿಶಿಷ್ಟರಲ್ಲಿ ಜಾತಿವಾರು ಜನಗಣತಿ ಪೂರ್ಣ ಪ್ರಮಾಣದಲ್ಲಿಲ್ಲ. ಆದಿ ಕರ್ನಾಟಕ ಎಂದು ಮಾದಿಗರು ಹಾಗೂ ಛಲವಾದಿಗಳು ಇಬ್ಬರೂ ಬರೆಸಿದ್ದಾರೆ. ಆದಿ ದ್ರಾವಿಡ ಎಂದು ಎರಡು ಸಮುದಾಯವರು ಬರೆಸಿದ್ದಾರೆ. ಆದ ಕಾರಣ ಜಿಲ್ಲವಾರು ವಿವೇಚನೆಯನ್ನು ಬಳಸಿ ಯಾವ ಜಿಲ್ಲೆಯವರು ಯಾವ ಸಮುದಾಯಕ್ಕೆ ಸೇರುತ್ತಾರೆ ಎನ್ನುವುದನ್ನು ನಾಗಮೋಹನ್ ದಾಸ್ ಸಮಿತಿ ತೀರ್ಮಾನ ಮಾಡಬೇಕು ಎಂದು ಸರಕಾರ ತನ್ನ ನಿಯಮದಲ್ಲಿ ಅವರಿಗೆ ತಿಳಿಸಿದೆ.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಎರಡು ತಿಂಗಳ ಅವಧಿಯಲ್ಲಿ ತನ್ನ ಶಿಫಾರಸುಗಳನ್ನು ಸಲ್ಲಿಸಲಿದ್ದು, ಬಳಿಕ ಸರ್ಕಾರವು ಒಳಮೀಸಲಾತಿ ವರದಿಯನ್ನು ಜಾರಿಗೆ ತರಲಿದೆ. ಅಲ್ಲಿಯವರೆಗೆ, 35,000 ಖಾಲಿ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆಯನ್ನು ಆರಂಭಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಚಂದ್ರಪ್ಪ ಅವರು ಮಾತನಾಡಿ, ಭೋವಿ, ಲಂಬಾಣಿ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವುದಾಗಿ ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸರಕಾರ ಒಳಮೀಸಲಾತಿ ಜಾರಿಗೆ ತರಲು ಬದ್ಧವಾಗಿದ್ದು, ದಶಕಗಳ ಕಾಲ ನಿರಂತರ ಹೋರಾಟ ನಡೆಸಿದ ಮಾದಿಗ ಸಮುದಾಯದವರು ಇನ್ನೆರಡು ತಿಂಗಳು ತಾಳ್ಮೆಯಿಂದ ಇರಬೇಕೆಂದು ಎಂದು ಮಾಜಿ ಸಚಿವ ಹೆಚ್.ಆಂಜನೇಯ ಅವರು ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT