ಸಚಿವ ಪ್ರಿಯಾಂಕ್ ಖರ್ಗೆ 
ರಾಜ್ಯ

ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯತ್ ಸದಸ್ಯರಿಗೆ ಒತ್ತಡ ಹೇರದಂತೆ ತಿಳಿಸಲಾಗಿದೆ. ಅವರ ಬೇಡಿಕೆಗಳನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು.

ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು.

ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯರಾದ ಧನಂಜಯ ಸಿರ್ಜಿ ಮತ್ತು ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಬೇಡಿಕೆಗಳನ್ನು ಸರ್ಕಾರ ಆಲಿಸಿದ್ದು, ಅವರ ಮನವಿಗಳನ್ನು ಹಣಕಾಸು ಇಲಾಖೆಗೆ ರವಾನಿಸಲಾಗಿದೆ. ಶೀಘ್ರದಲ್ಲೇ ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಗ್ರಾಮ ಪಂಚಾಯತ್ ಸದಸ್ಯರಿಗೆ ಒತ್ತಡ ಹೇರದಂತೆ ತಿಳಿಸಲಾಗಿದೆ. ಅವರ ಬೇಡಿಕೆಗಳನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಳಿಸಿದರು.

ಇದೇ ವೇಳೆ ಕೇರಳ ಮಾದರಿಯಲ್ಲಿ ಹಣ ಪಾವತಿ ಮಾಡಬೇಕೆಂಬ ಬೇಡಿಕೆಯ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರಿಗೆ ಕೇರಳ ಮಾದರಿಯಲ್ಲಿ ಮಾಸಿಕ ಗೌರವಧನ ನೀಡಲು ಸಾಧ್ಯವಿಲ್ಲ. ಅಲ್ಲಿ 1000 ಪಂಚಾಯಿತಿಗಳು ಇದ್ದರೆ ರಾಜ್ಯದಲ್ಲಿ 5,500 ಇವೆ. 95 ಸಾವಿರಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು ಇದ್ದಾರೆ. ಹಾಗಾಗಿ, ಎರಡೂ ರಾಜ್ಯಗಳ ಹೋಲಿಕೆ ಸಾಧ್ಯವಿಲ್ಲ ಎಂದು ಹೇಳಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿ ವಿವಾದ ಕೋರ್ಟ್‌ನಲ್ಲಿದೆ. ತೀರ್ಪು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಗ್ರಾಮ ಪಂಚಾಯಿತಿಗಳಿಗೆ ಇಲಾಖಾ ಯೋಜನೆಗಳ ಅನುಷ್ಠಾನ ಜವಾಬ್ದಾರಿ ನೀಡುವ ಪ್ರಕ್ರಿಯೆಗೆ ವೇಗ ನೀಡಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ನಿರ್ಧರಣೆಗೆ ಒಳಪಟ್ಟ ಎಲ್ಲ ಭೂಮಿ ಮತ್ತು ಕಟ್ಟಡಗಳ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆಯಲ್ಲಿ ಪತ್ತೆ ಮಾಡಿದ 1.41 ಕೋಟಿ ಆಸ್ತಿಯನ್ನು ಪಂಚತಂತ್ರದಲ್ಲಿ ಅಳವಡಿಸಲಾಗಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT