ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  
ರಾಜ್ಯ

ಮಾರ್ಚ್ ಅಂತ್ಯದೊಳಗೆ ಎಂಇಐ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ: BBMP

ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ತುಷಾರ್ ಗಿರಿನಾಥ್ ಅವರು ಸ್ವೀಕರಿಸಿದರು.

ಬೆಂಗಳೂರು: ಎಂಇಐ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಕಾಾರ್ಯ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಹೇಳಿದರು.

ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ತುಷಾರ್ ಗಿರಿನಾಥ್ ಅವರು ಸ್ವೀಕರಿಸಿದರು.

ಬೆಂಗಳೂರಿನ ಪಶ್ಚಿಮ ಭಾಗದ ತುಮಕೂರು ರಸ್ತೆ, ಕಂಠೀರವ ಸ್ಟುಡಿಯೋ ಮುಖ್ಯರಸ್ತೆ ಮತ್ತು ನಂದಿನಿ ಲೇಔಟ್ ನಡುವೆ ಸಂಪರ್ಕ ಕಲ್ಪಿಸುವ ಎಂಇಐ ರಸ್ತೆ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದುಸ, ಇದರಿಂದ ಸವಾರರಿಗೆ ಸಂಕಷ್ಟ ಎದುರಾಗಿದೆ, ಹೀಗಾಗಿ ಇಲ್ಲಿನ ನಿವಾಸಿಗಳು ಮತ್ತು ವಾಹನ ಸವಾರರು ಕಾಮಗಾರಿ ಕುರಿತು ದೂರು ನೀಡಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಅಧಿಕಾರಿಗಳು ಯಶವಂತಪುರದಲ್ಲಿ 950 ಮೀಟರ್‌ ಉದ್ದದ ಎಂಇಐ ರಸ್ತೆಯಲ್ಲಿ ಸಂಚಾರ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು ಎರಡು ತಿಂಗಳಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಸಲಾಗುತ್ತಿದೆ. ಎರಡೂ ಬದಿಯ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಕಾಮಗಾರಿ ನಡೆಸಲಾಗುತ್ತಿದೆ. ಈ ರಸ್ತೆಯಲ್ಲಿ ನೀರುಗಾಲುವೆ, ಒಳಚರಂಡಿ ಮಾರ್ಗ, ಡಕ್ಟ್ ಅಳವಡಿಕೆ, ವಿದ್ಯುತ್ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪಾದಚಾರಿ ಮಾರ್ಗ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಆಯುಕ್ತರು ಕಾಮಗಾರಿಯನ್ನು 2025ರ ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಬಳಿಕ ನಗರದ ಯಶವಂತಪುರ ರೈಲು ನಿಲ್ದಾಣದ ಬಳಿ ಇರುವ ತಣ್ಣೀರಹಳ್ಳ ಹಾಗೂ ರೈಲ್ವೆ ಕ್ವಾರ್ಟರ್ಸ್ ಬಳಿ 200 ಮೀಟರ್ ಉದ್ದದ ಪೈಪ್ ಲೈನ್ ಅಳವಡಿಕೆ ಕಾಮಗಾರಿಯನ್ನು ಮುಖ್ಯ ಆಯುಕ್ತರು ಪರಿಶೀಲನೆ ನಡೆಸಿದರು ಈ ವೇಳೆ ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ರೂ. 1.5 ಕೋಟಿ ವೆಚ್ಚದಲ್ಲಿ 1.8 ಮೀಟರ್ ಸಿಮೆಂಟ್ ಪೈಪ್ ಅಳವಡಿಸಲಾಗುತ್ತಿದೆ, ಈ ಕಾಮಗಾರಿ ಪೂರ್ಣಗೊಂಡರೆ ಇಲ್ಲಿ ಜಲಾವೃತವಾಗುವುದಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಈ ವೇಳೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಲಯ ಆಯುಕ್ತ ಸತೀಶ್, ವಲಯ ಜಂಟಿ ಆಯುಕ್ತೆ ಡಾ. ಆರತಿ ಆನಂದ್, ವಲಯ ಮುಖ್ಯ ಎಂಜಿನಿಯರ್ ಸ್ವಯಪ್ರಭಾ, ಕಾರ್ಯನಿರ್ವಾಹಕ ಎಂಜಿನಿಯರ್, ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT