ರೋಬೋಟಿಕ್ ಆನೆ, ಶಿಲ್ಪಾಶೆಟ್ಟಿ 
ರಾಜ್ಯ

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಗಿಫ್ಟ್ ನೀಡಿದ ನಟಿ ಶಿಲ್ಪಾ ಶೆಟ್ಟಿ!

ಆಗಾಗ್ಗೆ ರಂಭಾಪುರಿ ಮಠಕ್ಕೆ ಭೇಟಿ ನೀಡುವ ಶಿಲ್ಪಾಶೆಟ್ಟಿ ಜೀವಂತ ಆನೆ ನೀಡುವುದಾಗಿ ಸಂಕಲ್ಪ ಮಾಡಿಕೊಂಡಿದ್ದರಂತೆ.

ಚಿಕ್ಕಮಗಳೂರು: ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ರೇಣುಕಾಚಾರ್ಯ ದೇವಾಲಯಕ್ಕೆ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಭಾನುವಾರ ರೋಬೋಟಿಕ್ ಆನೆ ಗಿಫ್ಟ್ ನೀಡಿದ್ದಾರೆ. ಇದು ನೋಡುವುದಕ್ಕೆ ಜೀವಂತ ಆನೆಯಂತೆಯೇ ಭಾಸವಾಗಿತ್ತದೆ.

ವೀರಭದ್ರ ಎಂದು ಕರೆಯಲಾಗುವ ಈ ಆನೆಯನ್ನು ಅನಾವರಣಗೊಳಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ತಂತ್ರಜ್ಞಾನವು ದೇವಾಲಯಗಳಿಗೆ ಆನೆಗಳನ್ನು ಸಂಕೋಲೆಯಲ್ಲಿ ಇರಿಸದಂತೆ ಮಾಡಿದೆ ಎಂದರು.

ರಂಭಾಪುರಿ ಮಠದ ನಿರ್ಧಾರವನ್ನು ಶ್ಲಾಘಿಸಿದ ಸಚಿವರು, ಆನೆಯನ್ನು ನೀಡುವಂತೆ ಅನೇಕ ದೇವಾಲಯಗಳು ಮತ್ತು ಮಠಗಳು ಕೇಳಿವೆ. ಆದರೆ, ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಪ್ರಕಾರ, ಯಾವುದೇ ದೇವಾಲಯಕ್ಕೂ ಆನೆಗಳನ್ನು ಕೊಡುಗೆಯಾಗಿ ನೀಡಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ರೋಬೋಟಿಕ್ ನಂತಹ ತಂತ್ರಜ್ಞಾನ ಬಂದಿದ್ದು, ಶಿಲ್ಪಾಶೆಟ್ಟಿ ಅವರಿಗೆ ಕರ್ನಾಟಕ ಸರ್ಕಾರದ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

ಇಂಧನ ಸಚಿವ ಕೆಜೆ ಜಾರ್ಜ್, ಶಾಸಕ ಟಿ.ಡಿ. ರಾಜೇಗೌಡ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಮತ್ತಷ್ಟು ದೇವಾಲಯ ಹಾಗೂ ಮಠಗಳಲ್ಲಿ ರೋಬೋಟಿಕ್ ಆನೆಗಳನ್ನು ಇಡಲು ನಾವು ಪ್ರೋತ್ಸಾಹಿಸುತ್ತೇವೆ ಎಂದು ರಂಭಾಪುರಿ ಸ್ವಾಮೀಜಿ ಹೇಳಿದರು.

ಆಗಾಗ್ಗೆ ರಂಭಾಪುರಿ ಮಠಕ್ಕೆ ಭೇಟಿ ನೀಡುವ ಶಿಲ್ಪಾಶೆಟ್ಟಿ ಜೀವಂತ ಆನೆ ನೀಡುವುದಾಗಿ ಸಂಕಲ್ಪ ಮಾಡಿಕೊಂಡಿದ್ದರಂತೆ. ಆದರೆ, ಕಾನೂನಿನಲ್ಲಿ ಅದಕ್ಕೆ ತೊಡಕಿರುವ ಕಾರಣ ಇದೀಗ ರೋಬೋಟಿಕ್ ಆನೆ ಗಿಫ್ಟ್ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT