ರೋಬೋಟಿಕ್ ಆನೆ, ಶಿಲ್ಪಾಶೆಟ್ಟಿ 
ರಾಜ್ಯ

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಗಿಫ್ಟ್ ನೀಡಿದ ನಟಿ ಶಿಲ್ಪಾ ಶೆಟ್ಟಿ!

ಆಗಾಗ್ಗೆ ರಂಭಾಪುರಿ ಮಠಕ್ಕೆ ಭೇಟಿ ನೀಡುವ ಶಿಲ್ಪಾಶೆಟ್ಟಿ ಜೀವಂತ ಆನೆ ನೀಡುವುದಾಗಿ ಸಂಕಲ್ಪ ಮಾಡಿಕೊಂಡಿದ್ದರಂತೆ.

ಚಿಕ್ಕಮಗಳೂರು: ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ರೇಣುಕಾಚಾರ್ಯ ದೇವಾಲಯಕ್ಕೆ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಭಾನುವಾರ ರೋಬೋಟಿಕ್ ಆನೆ ಗಿಫ್ಟ್ ನೀಡಿದ್ದಾರೆ. ಇದು ನೋಡುವುದಕ್ಕೆ ಜೀವಂತ ಆನೆಯಂತೆಯೇ ಭಾಸವಾಗಿತ್ತದೆ.

ವೀರಭದ್ರ ಎಂದು ಕರೆಯಲಾಗುವ ಈ ಆನೆಯನ್ನು ಅನಾವರಣಗೊಳಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ತಂತ್ರಜ್ಞಾನವು ದೇವಾಲಯಗಳಿಗೆ ಆನೆಗಳನ್ನು ಸಂಕೋಲೆಯಲ್ಲಿ ಇರಿಸದಂತೆ ಮಾಡಿದೆ ಎಂದರು.

ರಂಭಾಪುರಿ ಮಠದ ನಿರ್ಧಾರವನ್ನು ಶ್ಲಾಘಿಸಿದ ಸಚಿವರು, ಆನೆಯನ್ನು ನೀಡುವಂತೆ ಅನೇಕ ದೇವಾಲಯಗಳು ಮತ್ತು ಮಠಗಳು ಕೇಳಿವೆ. ಆದರೆ, ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಪ್ರಕಾರ, ಯಾವುದೇ ದೇವಾಲಯಕ್ಕೂ ಆನೆಗಳನ್ನು ಕೊಡುಗೆಯಾಗಿ ನೀಡಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ರೋಬೋಟಿಕ್ ನಂತಹ ತಂತ್ರಜ್ಞಾನ ಬಂದಿದ್ದು, ಶಿಲ್ಪಾಶೆಟ್ಟಿ ಅವರಿಗೆ ಕರ್ನಾಟಕ ಸರ್ಕಾರದ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

ಇಂಧನ ಸಚಿವ ಕೆಜೆ ಜಾರ್ಜ್, ಶಾಸಕ ಟಿ.ಡಿ. ರಾಜೇಗೌಡ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಮತ್ತಷ್ಟು ದೇವಾಲಯ ಹಾಗೂ ಮಠಗಳಲ್ಲಿ ರೋಬೋಟಿಕ್ ಆನೆಗಳನ್ನು ಇಡಲು ನಾವು ಪ್ರೋತ್ಸಾಹಿಸುತ್ತೇವೆ ಎಂದು ರಂಭಾಪುರಿ ಸ್ವಾಮೀಜಿ ಹೇಳಿದರು.

ಆಗಾಗ್ಗೆ ರಂಭಾಪುರಿ ಮಠಕ್ಕೆ ಭೇಟಿ ನೀಡುವ ಶಿಲ್ಪಾಶೆಟ್ಟಿ ಜೀವಂತ ಆನೆ ನೀಡುವುದಾಗಿ ಸಂಕಲ್ಪ ಮಾಡಿಕೊಂಡಿದ್ದರಂತೆ. ಆದರೆ, ಕಾನೂನಿನಲ್ಲಿ ಅದಕ್ಕೆ ತೊಡಕಿರುವ ಕಾರಣ ಇದೀಗ ರೋಬೋಟಿಕ್ ಆನೆ ಗಿಫ್ಟ್ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT