ಆತುಲ್ ಸುಭಾಷ್, ತಂದೆ ಪವನ್ ಕುಮಾರ್ 
ರಾಜ್ಯ

ಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣ: ನನ್ನ ಮೊಮ್ಮಗನನ್ನು ನಮಗೆ ಕೊಡಿ- ಆತುಲ್ ತಂದೆ ಮನವಿ

ಆರೋಪಿಗಳು ನಮ್ಮ ಮೊಮ್ಮಗನನ್ನು ಎಲ್ಲಿ ಇರಿಸಿದ್ದಾರೆ ಎಂಬುದು ನಮಗೆ ತಿಳಿದಿಲ್ಲ. ಆತ ಕೊಲ್ಲಲ್ಪಟ್ಟಿದ್ದಾನೆಯೇ ಅಥವಾ ಅವನು ಬದುಕಿದ್ದಾನೆಯೇ? ನಮಗೆ ಏನೂ ಗೊತ್ತಿಲ್ಲ, ಅವನ ಬಗ್ಗೆ ನನಗೆ ಏನೂ ತಿಳಿದಿಲ್ಲ. ದಯವಿಟ್ಟು ನನ್ನ ಮೊಮ್ಮಗನನ್ನು ನಮಗೆ ಕೊಡಿ.

ಬೆಂಗಳೂರು: ತನ್ನ ಮಗನಿಗೆ ಕಿರುಕುಳ ನೀಡಿದವರಿಗೆ ಕಠಿಣ ಶಿಕ್ಷೆಯಾಗಬೇಕು, ನ್ಯಾಯ ಸಿಗುವವರೆಗೂ ಆತನ ಚಿತಾಭಸ್ಮವನ್ನು ನೀರಿನಲ್ಲಿ ವಿಸರ್ಜಿಸುವುದಿಲ್ಲ ಎಂದು ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ ಆತುಲ್ ಸುಭಾಷ್ ತಂದೆ ಭಾನುವಾರ ಹೇಳಿದ್ದಾರೆ.

34 ವರ್ಷದ ಸುಭಾಷ್ ಡಿಸೆಂಬರ್ 9 ರಂದು ಬೆಂಗಳೂರಿನ ಮುನ್ನೇಕೊಳಲು ಸಮೀಪದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಚ್ಛೇದಿತ ಪತ್ನಿ ಮತ್ತು ಅತ್ತೆ ತನ್ನನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿ ನಿರಂತರವಾಗಿ ಕಿರುಕುಳ ನೀಡಿದ ಪರಿಣಾಮ ಆತ್ಮಹತ್ಯೆಗೆ ಶರಣಾಗಿರುವುದಾಗಿ ಆತುಲ್ ಸುಭಾಷ್ ವಿಡಿಯೋ ಮತ್ತು ಡೆತ್ ನೋಟ್ ನಲ್ಲಿ ಹೇಳಿದ್ದಾರೆ.

ಸಮಸ್ತಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆತುಲ್ ಸುಭಾಷ್ ತಂದೆ ಪವನ್ ಕುಮಾರ್, ಆರೋಪಿಗಳನ್ನು ಬಂಧಿಸಿದ್ದಕ್ಕಾಗಿ ಕರ್ನಾಟಕದ ಪೊಲೀಸರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಮಗನಿಗೆ ಕಿರುಕುಳ ನೀಡಿದ ಎಲ್ಲರಿಗೂ ಶಿಕ್ಷೆಯಾಗಬೇಕು, ಅವನ ಸಾವಿಗೆ ನ್ಯಾಯ ಸಿಗಬೇಕು ಮತ್ತು ಆತ ಆತ್ಮಕ್ಕೆ ಶಾಂತಿ ಸಿಗಬೇಕು, ನಮಗೆ ನ್ಯಾಯ ಸಿಗುವವರೆಗೆ ಆತನ ಚಿತಾಭಸ್ಮವನ್ನು ವಿಸರ್ಜಿಸುವುದಿಲ್ಲ. ನನ್ನ ಮಗನಿಗೆ ಹಣಕ್ಕಾಗಿ ಆತನ ಹೆಂಡತಿಯಿಂದ ಕಿರುಕುಳ, ಚಿತ್ರಹಿಂಸೆ ಅವಮಾನ ಮಾಡಲಾಗಿದೆ. ದಯವಿಟ್ಟು ನಮಗೆ ನ್ಯಾಯ ಒದಗಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲರಿಗೂ ಎಲ್ಲರಿಗೂ ಮನವಿ ಮಾಡುತ್ತೇನೆ ಎಂದರು

ಸುಭಾಷ್ ಅವರ ವಿಚ್ಛೇದಿತ ಪತ್ನಿ ನಿಕಿತಾ ಸಿಂಘಾನಿಯಾ ಅವರನ್ನು ಹರಿಯಾಣದ ಗುರುಗ್ರಾಮ್‌ನಲ್ಲಿ ಬಂಧಿಸಲಾಗಿದ್ದು, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಅವರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆರೋಪಿಗಳು ನಮ್ಮ ಮೊಮ್ಮಗನನ್ನು ಎಲ್ಲಿ ಇರಿಸಿದ್ದಾರೆ ಎಂಬುದು ನಮಗೆ ತಿಳಿದಿಲ್ಲ. ಆತ ಕೊಲ್ಲಲ್ಪಟ್ಟಿದ್ದಾನೆಯೇ ಅಥವಾ ಅವನು ಬದುಕಿದ್ದಾನೆಯೇ? ನಮಗೆ ಏನೂ ಗೊತ್ತಿಲ್ಲ, ಅವನ ಬಗ್ಗೆ ನನಗೆ ಏನೂ ತಿಳಿದಿಲ್ಲ. ದಯವಿಟ್ಟು ನನ್ನ ಮೊಮ್ಮಗನನ್ನು ನಮಗೆ ಕೊಡಿ, ನಾವು ಅವನನ್ನು ಸಾಕುತ್ತೇವೆ ಎಂದು ಭಾವುಕವಾಗಿ ಪವನ್ ಕುಮಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್‌ ನಗರ: ಮೊದಲ ಮುಸ್ಲಿಂ ಮೇಯರ್ ಆಗಿ ಭಾರತೀಯ-ಅಮೆರಿಕನ್ ಜೋಹ್ರಾನ್ ಮಮ್ದಾನಿ ಆಯ್ಕೆ

ಅಮೆರಿಕದ ಕೆಂಟುಕಿಯಲ್ಲಿ ಟೇಕಾಫ್ ಆದ UPS cargo ವಿಮಾನ ಸ್ಫೋಟಗೊಂಡು ಪತನ: ಕನಿಷ್ಠ 3 ಸಾವು, 11 ಮಂದಿಗೆ ಗಾಯ-Video

ಮೊದಲು ಮತದಾನ ನಂತರ ಉಪಹಾರ: ಮಹಿಳಾ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಮಂತ್ರ!

ಬಿಹಾರದಲ್ಲಿ ಬದಲಾವಣೆಗಾಗಿ ತೇಜಸ್ವಿ ಯಾದವ್ ಸಿಎಂ ಆಗಬೇಕು: ಡಿ.ಕೆ. ಶಿವಕುಮಾರ್

ಅಮೆರಿಕಾದಲ್ಲಿ ಟ್ವಿನ್ ಟವರ್ ದಾಳಿ ನಂತರ ಇಡೀ ಪ್ರಪಂಚದಲ್ಲಿಯೇ ಬೆಂಗಳೂರು ಸುರಕ್ಷಿತ ಜಾಗ: ಡಿ.ಕೆ.ಶಿವಕುಮಾರ್

SCROLL FOR NEXT