ಸಾಂದರ್ಭಿಕ ಚಿತ್ರ 
ರಾಜ್ಯ

ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿ ವಿರುದ್ಧ ಪ್ರತಿಭಟನೆ: ಕೇಕ್ ಕತ್ತರಿಸಿ ವಾರ್ಷಿಕೋತ್ಸವ ಆಚರಿಸಿದ ವರ್ತೂರು ನಿವಾಸಿಗಳು

ಕಳೆದ ವರ್ಷ ಇದೇ ದಿನ ಉತ್ತಮ ರಸ್ತೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿ ವರ್ತೂರಿನಲ್ಲಿ ಗುಂಡಿಗಳನ್ನು ತುಂಬಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಿದ್ದರು.

ಬೆಂಗಳೂರು: ನಗರದ ಐಟಿ ಕಾರಿಡಾರ್‌ನ ಅವಿಭಾಜ್ಯ ಅಂಗವಾದ ವರ್ತೂರಿನ ನೂರಾರು ನಿವಾಸಿಗಳು ಶನಿವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ಪ್ರದೇಶಕ್ಕೆ ರಸ್ತೆ ದುರಸ್ತಿ ಮತ್ತು ಇತರ ಸೌಕರ್ಯಗಳನ್ನು ಒದಗಿಸದಿರುವುದನ್ನು ವಿರೋಧಿಸಿ ನಡೆಸಿದ ತಮ್ಮ ಪ್ರತಿಭಟನೆಯ ಮೊದಲ ವಾರ್ಷಿಕೋತ್ಸವವನ್ನು 'ಆಚರಿಸಿದರು'. ಈ ಸಂದರ್ಭದಲ್ಲಿ ಕೇಕ್ ಕತ್ತರಿಸಿದರು.

ಕಳೆದ ವರ್ಷ ಇದೇ ದಿನ ಉತ್ತಮ ರಸ್ತೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿ ವರ್ತೂರಿನಲ್ಲಿ ಗುಂಡಿಗಳನ್ನು ತುಂಬಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಿದ್ದರು. ಆದರೆ ಅವರ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಂಡಿಲ್ಲ. ಇಲ್ಲಿನ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಪಾಲಿಕೆಯ ಅಸಮರ್ಥತೆ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು. ಬಿಬಿಎಂಪಿ ಮುಖ್ಯ ಆಯುಕ್ತರು, ಮಹದೇವಪುರ ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್ ಮತ್ತು ವಾರ್ಡ್ ಅಧಿಕಾರಿಗಳಿಗೆ ಬಲವಾದ ಸಂದೇಶವನ್ನು ಕಳುಹಿಸಲು ಕೇಕ್ ಕತ್ತರಿಸುವ ಸಮಾರಂಭವನ್ನು ಆಯೋಜಿಸಿದ್ದರು.

ಇತ್ತೀಚೆಗೆ ಸುರಿದ ಮಳೆಗೆ ವರ್ತೂರು ಮಾತ್ರವಲ್ಲದೆ ಮಹದೇವಪುರ ವಲಯದ ಇತರ ಭಾಗಗಳಲ್ಲಿಯೂ ರಸ್ತೆಗಳು ಗುಂಡಿಗಳಿಂದ ತುಂಬಿವೆ. ನಾವು ಮನವಿ ಮಾಡಿದರೂ ಪಾಲಿಕೆ ಅಧಿಕಾರಿಗಳು ಗುಂಡಿಗಳನ್ನು ತುಂಬಿಸಲು ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು ವರ್ತೂರಿನ ಜಗದೀಶ್ ರೆಡ್ಡಿ ಹೇಳಿದರು. ಯೋಜನಾ ವಿಭಾಗದ ಬಿಬಿಎಂಪಿ ಅಧಿಕಾರಿಯೊಬ್ಬರು ಮಾತನಾಡಿ, ಮಹದೇವಪುರ ವಲಯದ ಹಲವು ರಸ್ತೆಗಳನ್ನು ವೈಟ್‌ ಟಾಪಿಂಗ್‌ಗೆ ಗುರುತಿಸಲಾಗಿದ್ದು, ಮಾರ್ಚ್‌ ಅಂತ್ಯದೊಳಗೆ ಗುಂಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಪಾಲಿಕೆಯು ಉಕ್ಕಿನ ಕೈಗಾರಿಕೆಗಳಿಂದ (ಕಬ್ಬಿಣ ಮತ್ತು ಉಕ್ಕಿನ ಸ್ಲ್ಯಾಗ್) ಕೈಗಾರಿಕಾ ತ್ಯಾಜ್ಯವನ್ನು ಬಳಸಿ ಅಭಿವೃದ್ಧಿಪಡಿಸಿದ ‘ಇಕೋಫಿಕ್ಸ್ ಮಿಶ್ರಣ’ದಿಂದ ಅವೆನ್ಯೂ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಪ್ರಾರಂಭಿಸಿದೆ. ಗುಂಡಿಗಳನ್ನು ತುಂಬಲು, ನೀರನ್ನು ಹರಿಸುವುದು ಮತ್ತು ಟ್ಯಾಕ್ ಕೋಟ್ ಹಾಕಲು ಅವುಗಳನ್ನು ಸ್ವಚ್ಛಗೊಳಿಸುವುದು ಅವಶ್ಯಕ. ಆದರೆ ಗುಂಡಿಗಳನ್ನು ಸ್ವಚ್ಛಗೊಳಿಸದೆಯೇ ‘ಇಕೋಫಿಕ್ಸ್ ಮಿಶ್ರಣ’ದಿಂದ ತುಂಬಿಸಬಹುದು. ಟ್ಯಾಕ್ ಕೋಟ್ ಅಗತ್ಯವಿಲ್ಲ ಎಂದು ಪಾಲಿಕೆ ಎಂಜಿನಿಯರ್‌ಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT