ಸಾಂದರ್ಭಿಕ ಚಿತ್ರ 
ರಾಜ್ಯ

ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿ ವಿರುದ್ಧ ಪ್ರತಿಭಟನೆ: ಕೇಕ್ ಕತ್ತರಿಸಿ ವಾರ್ಷಿಕೋತ್ಸವ ಆಚರಿಸಿದ ವರ್ತೂರು ನಿವಾಸಿಗಳು

ಕಳೆದ ವರ್ಷ ಇದೇ ದಿನ ಉತ್ತಮ ರಸ್ತೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿ ವರ್ತೂರಿನಲ್ಲಿ ಗುಂಡಿಗಳನ್ನು ತುಂಬಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಿದ್ದರು.

ಬೆಂಗಳೂರು: ನಗರದ ಐಟಿ ಕಾರಿಡಾರ್‌ನ ಅವಿಭಾಜ್ಯ ಅಂಗವಾದ ವರ್ತೂರಿನ ನೂರಾರು ನಿವಾಸಿಗಳು ಶನಿವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ಪ್ರದೇಶಕ್ಕೆ ರಸ್ತೆ ದುರಸ್ತಿ ಮತ್ತು ಇತರ ಸೌಕರ್ಯಗಳನ್ನು ಒದಗಿಸದಿರುವುದನ್ನು ವಿರೋಧಿಸಿ ನಡೆಸಿದ ತಮ್ಮ ಪ್ರತಿಭಟನೆಯ ಮೊದಲ ವಾರ್ಷಿಕೋತ್ಸವವನ್ನು 'ಆಚರಿಸಿದರು'. ಈ ಸಂದರ್ಭದಲ್ಲಿ ಕೇಕ್ ಕತ್ತರಿಸಿದರು.

ಕಳೆದ ವರ್ಷ ಇದೇ ದಿನ ಉತ್ತಮ ರಸ್ತೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿ ವರ್ತೂರಿನಲ್ಲಿ ಗುಂಡಿಗಳನ್ನು ತುಂಬಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಿದ್ದರು. ಆದರೆ ಅವರ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಂಡಿಲ್ಲ. ಇಲ್ಲಿನ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಪಾಲಿಕೆಯ ಅಸಮರ್ಥತೆ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು. ಬಿಬಿಎಂಪಿ ಮುಖ್ಯ ಆಯುಕ್ತರು, ಮಹದೇವಪುರ ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್ ಮತ್ತು ವಾರ್ಡ್ ಅಧಿಕಾರಿಗಳಿಗೆ ಬಲವಾದ ಸಂದೇಶವನ್ನು ಕಳುಹಿಸಲು ಕೇಕ್ ಕತ್ತರಿಸುವ ಸಮಾರಂಭವನ್ನು ಆಯೋಜಿಸಿದ್ದರು.

ಇತ್ತೀಚೆಗೆ ಸುರಿದ ಮಳೆಗೆ ವರ್ತೂರು ಮಾತ್ರವಲ್ಲದೆ ಮಹದೇವಪುರ ವಲಯದ ಇತರ ಭಾಗಗಳಲ್ಲಿಯೂ ರಸ್ತೆಗಳು ಗುಂಡಿಗಳಿಂದ ತುಂಬಿವೆ. ನಾವು ಮನವಿ ಮಾಡಿದರೂ ಪಾಲಿಕೆ ಅಧಿಕಾರಿಗಳು ಗುಂಡಿಗಳನ್ನು ತುಂಬಿಸಲು ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು ವರ್ತೂರಿನ ಜಗದೀಶ್ ರೆಡ್ಡಿ ಹೇಳಿದರು. ಯೋಜನಾ ವಿಭಾಗದ ಬಿಬಿಎಂಪಿ ಅಧಿಕಾರಿಯೊಬ್ಬರು ಮಾತನಾಡಿ, ಮಹದೇವಪುರ ವಲಯದ ಹಲವು ರಸ್ತೆಗಳನ್ನು ವೈಟ್‌ ಟಾಪಿಂಗ್‌ಗೆ ಗುರುತಿಸಲಾಗಿದ್ದು, ಮಾರ್ಚ್‌ ಅಂತ್ಯದೊಳಗೆ ಗುಂಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಪಾಲಿಕೆಯು ಉಕ್ಕಿನ ಕೈಗಾರಿಕೆಗಳಿಂದ (ಕಬ್ಬಿಣ ಮತ್ತು ಉಕ್ಕಿನ ಸ್ಲ್ಯಾಗ್) ಕೈಗಾರಿಕಾ ತ್ಯಾಜ್ಯವನ್ನು ಬಳಸಿ ಅಭಿವೃದ್ಧಿಪಡಿಸಿದ ‘ಇಕೋಫಿಕ್ಸ್ ಮಿಶ್ರಣ’ದಿಂದ ಅವೆನ್ಯೂ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಪ್ರಾರಂಭಿಸಿದೆ. ಗುಂಡಿಗಳನ್ನು ತುಂಬಲು, ನೀರನ್ನು ಹರಿಸುವುದು ಮತ್ತು ಟ್ಯಾಕ್ ಕೋಟ್ ಹಾಕಲು ಅವುಗಳನ್ನು ಸ್ವಚ್ಛಗೊಳಿಸುವುದು ಅವಶ್ಯಕ. ಆದರೆ ಗುಂಡಿಗಳನ್ನು ಸ್ವಚ್ಛಗೊಳಿಸದೆಯೇ ‘ಇಕೋಫಿಕ್ಸ್ ಮಿಶ್ರಣ’ದಿಂದ ತುಂಬಿಸಬಹುದು. ಟ್ಯಾಕ್ ಕೋಟ್ ಅಗತ್ಯವಿಲ್ಲ ಎಂದು ಪಾಲಿಕೆ ಎಂಜಿನಿಯರ್‌ಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?