ಸಿದ್ದರಾಮಯ್ಯ  
ರಾಜ್ಯ

ಮುಂದಿನ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಿರ್ಧಾರ: ಸಿಎಂ ಸಿದ್ದರಾಮಯ್ಯ

ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಲು ವಿಫಲವಾಗಿರುವ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ತಿರುಗೇಟು ನೀಡಿದರು.

ಬೆಳಗಾವಿ: ಮುಂದಿನ ಮೂರು ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಿರ್ಧರಿಸಿದ್ದೇವೆ. ವಿರೋಧ ಪಕ್ಷಗಳು ಯಾವ ವಿಷಯಗಳನ್ನು ಎತ್ತಬಹುದೆಂದು ನಾವು ಊಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಕ್ಫ್ ಸಮಸ್ಯೆಗೆ ಸಂಬಂಧಿಸಿದಂತೆ, "ನಾವು ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ಚರ್ಚೆ ಪೂರ್ಣಗೊಂಡಿಲ್ಲ. ಅವರು ಈ ವಿಷಯವನ್ನು ಪ್ರಸ್ತಾಪಿಸುತ್ತಾರೋ ಅಥವಾ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಗಮನ ಹರಿಸುತ್ತಾರೋ ಗೊತ್ತಿಲ್ಲ. ಉತ್ತರಿಸಲು ಮತ್ತು ಚರ್ಚೆಗೆ ಸರ್ಕಾರ ಸಿದ್ಧವಾಗಿದೆ ಎಂದರು.

ಬಿವೈ ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿರುವುದಾಗಿ ಮುಖ್ಯಮಂತ್ರಿಗಳು ಹೇಳಿರುವುದು ಸುಳ್ಳು ಎಂದ ಅನ್ವರ್ ಮಾಣಿಪ್ಪಾಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, “ಮಾಣಿಪ್ಪಾಡಿ ಅವರು ಈ ಹಿಂದೆಯೇ ಹೇಳಿಕೆ ನೀಡಿದ್ದಾರೆ. ಈಗ ಯೂಟರ್ನ್ ಹೊಡೆದಿದ್ದಾರೆ ಎಂದರು.

“ಅವರ ಹೇಳಿಕೆಯನ್ನು ಆಧರಿಸಿ ನಾವು ಪ್ರತಿಕ್ರಿಯಿಸಿದ್ದೇವೆ. ಅವರು ಅದನ್ನು ಸುಳ್ಳು ಎಂದು ಹೇಳಿದರೆ, ನಾವು ಏನು ಮಾಡಬಹುದು? ನನ್ನ ದೃಷ್ಟಿಯಲ್ಲಿ, ನಾನು ಸೂಕ್ತವಾಗಿ ಪ್ರತಿಕ್ರಿಯಿಸಿದ್ದೇನೆ. 150 ಕೋಟಿ ಆಫರ್ ಮಾಡಲಾಗಿದೆ. ಅವರು ಆರೋಪಗಳನ್ನು ಮಾಡುತ್ತಿರುವ ವಿಡಿಯೊ ರೆಕಾರ್ಡಿಂಗ್ ಇದೆ. ಈಗ ಹಲವು ವರ್ಷಗಳ ನಂತರ ಅದನ್ನು ನಿರಾಕರಿಸುತ್ತಿದ್ದಾರೆ. ನಾವೇನು ​​ಮಾಡಬೇಕು?” ಎಂದರು.

ಪ್ರತಿಭಟನಾಕಾರರ ಮೇಲೆ ನಡೆದ ಲಾಠಿ ಪ್ರಹಾರಕ್ಕೆ ಸಂಬಂಧಿಸಿದಂತೆ ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯಮೃತ್ಯುಂಜಯ ಸ್ವಾಮಿ ಅವರ ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜೋಶಿ ಅವರು ಅಧಿಕಾರದಲ್ಲಿದ್ದಾಗ ಈ ಬಗ್ಗೆ ಏಕೆ ಹೇಳಲಿಲ್ಲ? ಯಾರು ಕ್ಷಮೆ ಕೇಳಬೇಕು? ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಲು ವಿಫಲವಾಗಿರುವ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ