ಡ್ರೋನ್ ಪ್ರತಾಪ್ 
ರಾಜ್ಯ

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ

ಡ್ರೋನ್​ ಪ್ರತಾಪ್​ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಹಾಜರುಪಡಿಸಿದರು.

ತುಮಕೂರು: ನೀರಿಗೆ ಸೋಡಿಯಂ ಮೆಟಲ್ ಎಸೆದು ಬ್ಲಾಸ್ಟ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕನ್ನಡದ ಬಿಗ್​ಬಾಸ್​ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ಕೋರ್ಟ್ ಸೋಮವಾರ 10 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಡ್ರೋನ್​ ಪ್ರತಾಪ್​ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಹಾಜರುಪಡಿಸಿದರು. ಆರೋಪಿಯ ವಿಚಾರಣೆ ನಡೆಸಿದ ಕೋರ್ಟ್, ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ ಆರೋಪದ ಮೇಲೆ ಕಳೆದ ಗುರುವಾರ ಡ್ರೋನ್​ ಪ್ರತಾಪ್​ ಅವರನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದರು.

ಬಳಿಕ, ಪೊಲೀಸರು ಡ್ರೋನ್​ ಪ್ರತಾಪ್​ನನ್ನು ಶುಕ್ರವಾರ ‌ಮಧುಗಿರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ಮೂರು ದಿನ ಪೊಲೀಸ್​ ಕಸ್ಟಡಿಗೆ ನೀಡಿತ್ತು.

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ ಸಂಬಂಧ ಡ್ರೋನ್​ ಪ್ರತಾಪ್​ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT