ಡ್ರೋನ್ ಪ್ರತಾಪ್ 
ರಾಜ್ಯ

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ

ಡ್ರೋನ್​ ಪ್ರತಾಪ್​ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಹಾಜರುಪಡಿಸಿದರು.

ತುಮಕೂರು: ನೀರಿಗೆ ಸೋಡಿಯಂ ಮೆಟಲ್ ಎಸೆದು ಬ್ಲಾಸ್ಟ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕನ್ನಡದ ಬಿಗ್​ಬಾಸ್​ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ಕೋರ್ಟ್ ಸೋಮವಾರ 10 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಡ್ರೋನ್​ ಪ್ರತಾಪ್​ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಹಾಜರುಪಡಿಸಿದರು. ಆರೋಪಿಯ ವಿಚಾರಣೆ ನಡೆಸಿದ ಕೋರ್ಟ್, ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ ಆರೋಪದ ಮೇಲೆ ಕಳೆದ ಗುರುವಾರ ಡ್ರೋನ್​ ಪ್ರತಾಪ್​ ಅವರನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದರು.

ಬಳಿಕ, ಪೊಲೀಸರು ಡ್ರೋನ್​ ಪ್ರತಾಪ್​ನನ್ನು ಶುಕ್ರವಾರ ‌ಮಧುಗಿರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ಮೂರು ದಿನ ಪೊಲೀಸ್​ ಕಸ್ಟಡಿಗೆ ನೀಡಿತ್ತು.

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ ಸಂಬಂಧ ಡ್ರೋನ್​ ಪ್ರತಾಪ್​ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT