ಸಂಗ್ರಹ ಚಿತ್ರ 
ರಾಜ್ಯ

ಹೋಟೆಲ್, ಬೇಕರಿ ಉದ್ಯಮಿಗಳ ಮೇಲೆ ಅಪರಾಧ ಕೃತ್ಯ ಹೆಚ್ಚಳ: ಜಿ.ಕೆ ಶೆಟ್ಟಿ ಕಳವಳ

ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ಹೋಟೆಲ್ ಮತ್ತು ಬೇಕರಿ ಮಾಲೀಕರು ಹಫ್ತಾ ವಸೂಲಿಗೆ ಸುಲಭ ಬಲಿಪಶುಗಳಾಗುತ್ತಿದ್ದಾರೆ.

ಬೆಂಗಳೂರು: ರಾಜ್ಯದೆಲ್ಲೆಡೆ ಹೋಟೆಲ್ ಹಾಗೂ ಬೇಕರಿ ಉದ್ಯಮಿಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಕೊಲೆ, ಹಲ್ಲೆ ಮತ್ತಿತರ ಅಪರಾಧಿ ಕೃತ್ಯಗಳ ಬಗ್ಗೆ ಕರ್ನಾಟಕ ರಾಜ್ಯ ಹೋಟೆಲ್ ಗಳ ಸಂಘ ಕಳವಳ ವ್ಯಕ್ತಪಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಜಿ ಕೆ ಶೆಟ್ಟಿ ಅವರು, ಇಂತಹ ಅಪರಾಧಿ ಕೃತ್ಯಗಳನ್ನು ತಡೆಗಟ್ಟಲು ರಾಜ್ಯ ಸರಕಾರ ಹಾಗೂ ಪೊಲೀಸ್ ಇಲಾಖೆ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕೆಆರ್‌ಎಸ್ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಬೇಕರಿ ಮಾಲೀಕ ಚೇತನ್ ಅವರನ್ನು ಇತ್ತೀಚಿಗೆ ಹಾಡುಹಗಲೇ ರೌಡಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿರುವ ಘಟನೆ ಹೋಟೆಲ್ ಮಾಲೀಕರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ.

ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ಹೋಟೆಲ್ ಮತ್ತು ಬೇಕರಿ ಮಾಲೀಕರು ಹಫ್ತಾ ವಸೂಲಿಗೆ ಸುಲಭ ಬಲಿಪಶುಗಳಾಗುತ್ತಿದ್ದಾರೆ. ಒಂದೊಮ್ಮೆ ಹಫ್ತಾ ನೀಡದಿದ್ದರೆ ಅವರ ಮೇಲೆ ದೈಹಿಕ ಹಲ್ಲೆ, ಕೊಲೆ ಬೆದರಿಕೆ ಒಡ್ಡಲಾಗುತ್ತಿದೆ. ಕೊಲೆಯಂತಹ ಹೀನ ಕೃತ್ಯಗಳ ಮೂಲಕ ಹೋಟೆಲ್ ಮತ್ತು ಬೇಕರಿ ಮಾಲೀಕರಲ್ಲಿ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ.

ಹೋಟೆಲ್ ಮತ್ತು ಬೇಕರಿ ಮಾಲೀಕರು ಸ್ಥಳೀಯ ಸಂಸ್ಥೆಗಳಿಗೆ, ರಾಜ್ಯ ಸರಕಾರಕ್ಕೆ, ಕೇಂದ್ರ ಸರಕಾರಕ್ಕೆ ಟ್ರೇಡ್ ಲೈಸೆನ್ಸ್, ಜಿಎಸ್‌ಟಿ ಹೀಗೆ ನಾನಾ ರೂಪದಲ್ಲಿ ಪ್ರತಿವರ್ಷ ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುತ್ತಿದ್ದಾರೆ. ಆ ಮೂಲಕ ದೇಶ ಕಟ್ಟುವ ಕಾಯಕದಲ್ಲಿ ತೊಡಗಿದ್ದಾರೆ. ಸ್ಥಳೀಯವಾಗಿ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ ಮೂಲಕ ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಆದರೂ ಅವರ ಜೀವಕ್ಕೆ ರಕ್ಷಣೆ ಇಲ್ಲದಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಈ ಸಂಬಂಧ ಗೃಹ ಸಚಿವ ಡಾ. ಜಿ ಪರಮೇಶ್ವರ ಆವರಿಗೆ ಮನವಿ ಪತ್ರವನ್ನು ಸಲ್ಲಿಸಲಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಖಚಿತಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಘದ ಎಲ್ಲಾ ಸದಸ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ. ಇದೇ ವೇಳೆ ಸಂತ್ರಸ್ತ ವ್ಯಕ್ತಿಗೆ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT