ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲೂ ​'ಷಟಲ್​ ಬಸ್​ ಸೇವೆ' ಆರಂಭಿಸಲು Uber ಮುಂದು!

ಟ್ರಾಫಿಕ್​ ಕಿರಿಕಿರಿಯಿಂದ ಬಸವಳಿದಿರುವ ಟೆಕ್ಕಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪ್ರಾರಂಭಿಕ ಹಂತದಲ್ಲಿ ಔಟರ್ ರಿಂಗ್ ರಸ್ತೆ ಟೆಕ್ ಕಾರಿಡಾರ್‌ನಲ್ಲಿ 200 ಹವಾನಿಯಂತ್ರಿತ ಬಸ್‌ಗಳನ್ನು ಓಡಿಸಲು ಉಬರ್ ಚಿಂತನೆ ನಡೆಸುತ್ತಿದೆ.

ಬೆಂಗಳೂರು: ದೆಹಲಿ, ಕೊಲ್ಕತ್ತಾ, ಹೈದರಾಬಾದ್​ ಮತ್ತು ಮುಂಬೈನಂತಹ ಮಹಾನಗರಗಳಲ್ಲಿ ಉಬರ್​ ಷಟಲ್​ ಬಸ್” (Uber Shuttle) ಸೇವೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸೇವೆಯನ್ನು ಪರಿಚಯಿಸಲು ಉಬರ್ ಮುಂದಾಗಿದೆ. ಇದಕ್ಕಾಗಿ ಸರ್ಕಾರದ ಅನುಮತಿಗಾಗಿ ಕಾಯುತ್ತಿದೆ.

ಟ್ರಾಫಿಕ್​ ಕಿರಿಕಿರಿಯಿಂದ ಬಸವಳಿದಿರುವ ಟೆಕ್ಕಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪ್ರಾರಂಭಿಕ ಹಂತದಲ್ಲಿ ಔಟರ್ ರಿಂಗ್ ರಸ್ತೆ ಟೆಕ್ ಕಾರಿಡಾರ್‌ನಲ್ಲಿ 200 ಹವಾನಿಯಂತ್ರಿತ ಬಸ್‌ಗಳನ್ನು ಓಡಿಸಲು ಉಬರ್ ಚಿಂತನೆ ನಡೆಸುತ್ತಿದೆ.

ಪ್ರಸ್ತಾವಿತ ಸೇವೆಯು 2-3 ನಿಮಿಷಗಳ ಮಧ್ಯಂತರದಲ್ಲಿ ಚಲಿಸುತ್ತದೆ, ಪ್ರಯಾಣಿಕರಿಗೆ ಆಸನಗಳನ್ನು ಮುಂಗಡ ಕಾಯ್ದಿರಿಸುವ, ಗೊತ್ತುಪಡಿಸಿದ ಸ್ಥಳಗಳಿಂದ ಪಿಕಪ್ ಮತ್ತು ಗಮ್ಯಸ್ಥಾನಗಳಿಗೆ ತಲುಪಿಸುವ ಕೆಲಸ ಮಾಡಲಿದೆ ಎಂದು ಉಬರ್ ಮಾಹಿತಿ ನೀಡಿದೆ.

ಉಬರ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾದ ಪ್ರಾದೇಶಿಕ ವ್ಯಾಪಾರ ಕಾರ್ಯಾಚರಣೆಗಳ ಮುಖ್ಯಸ್ಥ ಅಭಿಷೇಕ್ ಪಾಧ್ಯೆ ಮಾತನಾಡಿ, ಕೋಲ್ಕತ್ತಾ ಮತ್ತು ದೆಹಲಿಯಲ್ಲಿ ಶಟಲ್ ಬಸ್ ಸೇವೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಶೀಘ್ರದಲ್ಲೇ ಬೆಂಗಳೂರಿನಲ್ಲೂ ಈ ಸೇವೆ ಪ್ರಾರಂಭವಾಗಲಿದೆ. ಸರ್ಕಾರದಿಂದ ಅನುಮೋದನೆ ಸಿಗುವ ವಿಶ್ವಾಸವಿದ್ದು, ಆ ಮೂಲಕ ನಗರದ ಸಂಚಾರ ದಟ್ಟಣೆ ಪರಿಹರಿಸುವಲ್ಲಿ ಉಬರ್ ಕೂಡ ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

ಔಟರ್ ರಿಂಗ್ ರೋಡ್ ನಲ್ಲಿ ಹಲವು ಐಟಿ ಕಂಪನಿಗಳಿದ್ದು, ಲಕ್ಷಾಂತರ ಐಟಿ ಉದ್ಯೋಗಿಗಳು ನೆಲೆಯೂರಿದ್ದಾರೆ. ಬೆಂಗಳೂರಿನ ದಟ್ಟಣೆ ಸಮಸ್ಯೆ ದೆಹಲಿ ಮತ್ತು ಕೋಲ್ಕತ್ತಾಕ್ಕಿಂತ ಹೆಚ್ಚಾಗಿದೆ. ಟೆಕ್ ಪಾರ್ಕ್ ಗಳಲ್ಲಿ ಈ ಸೇವೆ ಹೊಂದಿಕೊಳ್ಳುತ್ತದೆ. ಇತರೆ ನಗರಗಳಿಗೆ ಹೋಲಿಕೆ ಮಾಡಿದರೆ,ಲಬೆಂಗಳೂರು ಮತ್ತು ಹೈದರಾಬಾದ್ ಹೆಚ್ಚಿನ ಟೆಕ್ ಪಾರ್ಕ್‌ಗಳನ್ನು ಹೊಂದಿರುವ ನಗರಗಳಾಗಿವೆ.

ಉಬರ್ ಷಟಲ್‌ಗೆ ಸಾರ್ವಜನಿಕ ಬೆಂಬಲವನ್ನು ಸಂಗ್ರಹಿಸಲು, ಕಂಪನಿಯು ಕಳೆದ ತಿಂಗಳು ನಗರದಲ್ಲಿ ನಡೆದ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಬಸ್ ಅನ್ನು ಪ್ರದರ್ಶಿಸಿತ್ತು. ಶೃಂಗಸಭೆಯಲ್ಲಿ ಕಂಪನಿಯು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಇತರರಿಗೆ ಮಾದರಿಯನ್ನು ವಿವರಿಸಿದೆ. ಇದೀಗ ಸರ್ಕಾರದ ಅನುಮತಿಗಾಗಿ ಕಾಯುತ್ತಿದೆ ಎಂದು ತಿಳಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT