ರೈತರ ಪ್ರತಿಭಟನೆ 
ರಾಜ್ಯ

ಕೃಷಿ ಕ್ಷೇತ್ರಕ್ಕೆ ನ್ಯಾಯಕ್ಕೆ ಆಗ್ರಹ: ಸುವರ್ಣಸೌಧದ ಬಳಿ ರೈತರ ಪ್ರತಿಭಟನೆ

ರೈತರ ಪ್ರತಿಭಟನೆ ವೇಳೆ ಹಲವು ಶಾಸಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.

ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದವು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು.

ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ ನೀಡಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಕಾಯ್ದೆ ತಿದ್ದುಪಡಿ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಹಗಲು ಹೊತ್ತು ನಿರಂತರ 12 ಗಂಟೆ ಥ್ರೀ ಫೇಸ್ ವಿದ್ಯುತ್ ಹಾಗೂ ರಾತ್ರಿ ನಿರಂತರ ಸಿಂಗಲ್ ಫೇಸ್ ವಿದ್ಯುತ್ ಕಡ್ಡಾಯವಾಗಿ ಪೂರೈಕೆ ಮಾಡಬೇಕು. ಅಕ್ರಮ-ಸಕ್ರಮ ಹಾಗೂ ಶೀಘ್ರ ಸಂಪರ್ಕ ಯೋಜನೆಯನ್ನು ಮುಂದುವರೆಸಬೇಕು. ಭತ್ತದ ಬೆಳೆಗೆ ಕನಿಷ್ಠ ಪ್ರತಿ ಕ್ವಿಂಟಾಲ್ ಗೆ 5. ಸಾವಿರ ರೂ.ದರ ನೀಡಬೇಕು. ದ್ರಾಕ್ಷಿ (ಒಣ) ಬೆಳೆಗೆ ಪ್ರತಿ ಕೆಜಿಗೆ 400 ರೂ. ಬೆಂಬಲ ಬೆಲೆ ನೀಡಬೇಕು. ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು, ಭೂಸ್ವಾಧೀನ ಕಾಯ್ದೆಯ ತಿದ್ದುಪಡಿ, ಎಪಿಎಂಸಿ ಕಾಯ್ದೆಯನ್ನು ರದ್ದುಪಡಿಸಬೇಕು.

ರಾಜ್ಯದಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪುನಃಚೇತನಗೊಳಿಸಬೇಕು. ಮಹದಾಯಿ, ಕಳಸಾ ಬಂಡೂರಿ ಮೇಕೆದಾಟು ಯೋಜನೆ ಸೇರಿದಂತೆ ಬಾಕಿ ಉಳಿದ ನೀರಾವರಿ ಯೋಜನೆಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಆಲಮಟ್ಟಿ ಜಲಾಶಯವನ್ನು ಮೇಲ್ದರ್ಜೇಗೇರಿಸಬೇಕು ಎಂದು ಒತ್ತಾಯಿಸಿದರು.

ರೈತರ ಪ್ರತಿಭಟನೆ ವೇಳೆ ಹಲವು ಶಾಸಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು. ಇನ್ನಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಹಿಂದೆ ನೀಡಿದ್ದ ಭರವಸೆಗಳು ಕಾರ್ಯರೂಪಕ್ಕೆ ಇನ್ನೂ ಬಂದಿಲ್ಲ. ಹೀಗಾಗಿ ಈ ಬಾರಿ ನಾವು ಭರವಸೆಗಳಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT