ರೈತರ ಪ್ರತಿಭಟನೆ 
ರಾಜ್ಯ

ಕೃಷಿ ಕ್ಷೇತ್ರಕ್ಕೆ ನ್ಯಾಯಕ್ಕೆ ಆಗ್ರಹ: ಸುವರ್ಣಸೌಧದ ಬಳಿ ರೈತರ ಪ್ರತಿಭಟನೆ

ರೈತರ ಪ್ರತಿಭಟನೆ ವೇಳೆ ಹಲವು ಶಾಸಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.

ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದವು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು.

ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ ನೀಡಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಕಾಯ್ದೆ ತಿದ್ದುಪಡಿ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಹಗಲು ಹೊತ್ತು ನಿರಂತರ 12 ಗಂಟೆ ಥ್ರೀ ಫೇಸ್ ವಿದ್ಯುತ್ ಹಾಗೂ ರಾತ್ರಿ ನಿರಂತರ ಸಿಂಗಲ್ ಫೇಸ್ ವಿದ್ಯುತ್ ಕಡ್ಡಾಯವಾಗಿ ಪೂರೈಕೆ ಮಾಡಬೇಕು. ಅಕ್ರಮ-ಸಕ್ರಮ ಹಾಗೂ ಶೀಘ್ರ ಸಂಪರ್ಕ ಯೋಜನೆಯನ್ನು ಮುಂದುವರೆಸಬೇಕು. ಭತ್ತದ ಬೆಳೆಗೆ ಕನಿಷ್ಠ ಪ್ರತಿ ಕ್ವಿಂಟಾಲ್ ಗೆ 5. ಸಾವಿರ ರೂ.ದರ ನೀಡಬೇಕು. ದ್ರಾಕ್ಷಿ (ಒಣ) ಬೆಳೆಗೆ ಪ್ರತಿ ಕೆಜಿಗೆ 400 ರೂ. ಬೆಂಬಲ ಬೆಲೆ ನೀಡಬೇಕು. ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು, ಭೂಸ್ವಾಧೀನ ಕಾಯ್ದೆಯ ತಿದ್ದುಪಡಿ, ಎಪಿಎಂಸಿ ಕಾಯ್ದೆಯನ್ನು ರದ್ದುಪಡಿಸಬೇಕು.

ರಾಜ್ಯದಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪುನಃಚೇತನಗೊಳಿಸಬೇಕು. ಮಹದಾಯಿ, ಕಳಸಾ ಬಂಡೂರಿ ಮೇಕೆದಾಟು ಯೋಜನೆ ಸೇರಿದಂತೆ ಬಾಕಿ ಉಳಿದ ನೀರಾವರಿ ಯೋಜನೆಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಆಲಮಟ್ಟಿ ಜಲಾಶಯವನ್ನು ಮೇಲ್ದರ್ಜೇಗೇರಿಸಬೇಕು ಎಂದು ಒತ್ತಾಯಿಸಿದರು.

ರೈತರ ಪ್ರತಿಭಟನೆ ವೇಳೆ ಹಲವು ಶಾಸಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು. ಇನ್ನಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಹಿಂದೆ ನೀಡಿದ್ದ ಭರವಸೆಗಳು ಕಾರ್ಯರೂಪಕ್ಕೆ ಇನ್ನೂ ಬಂದಿಲ್ಲ. ಹೀಗಾಗಿ ಈ ಬಾರಿ ನಾವು ಭರವಸೆಗಳಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT