ಹೊಸ ಪ್ರಭೇದದ ಕಡಜ  
ರಾಜ್ಯ

ಬಿಳಿಗಿರಿರಂಗನ ಬೆಟ್ಟದಲ್ಲಿ ಹೊಸ ಪ್ರಭೇದದ ವರ್ಣರಂಜಿತ ಕಡಜ ಪತ್ತೆ..!

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ದೇಶದ 4 ವಿವಿಧ ಭಾಗಗಳಲ್ಲಿ ಈ ಹೊಸ ಪ್ರಭೇದದ ಕಡಜವನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ.

ಮೈಸೂರು: ವಿಶಿಷ್ಟ ಅರಣ್ಯವನ್ನು ಹೊಂದಿರುವ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ವನ್ಯಧಾಮದಲ್ಲಿ ಹೊಸ ಪ್ರಭೇದದ ವರ್ಣರಂಜಿತ ಕಡಜವೊಂದು ಪತ್ತೆಯಾಗಿದೆ.

ಅಶೋಕ ಟ್ರಸ್ಟ್ ಫಾರ್ ರಿಸರ್ಚ್ ಇನ್ ಎಕಾಲಜಿ ಅಂಡ್ ಎನ್ವಿರಾನ್‌ಮೆಂಟ್ (ATREE) ಸಂಶೋಧಕರಾದ ರಂಜಿತ್ ಎ ಪಿ ಮತ್ತು ಪ್ರಿಯದರ್ಶನನ್ ಧರ್ಮ ರಾಜನ್ ಅವರು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗಸ್ವಾಮಿ ದೇವಸ್ಥಾನ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೊಸ ಪ್ರಭೇದದ ಕಡಜವನ್ನು ಪತ್ತೆ ಮಾಡಿದ್ದಾರೆ.

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ದೇಶದ 4 ವಿವಿಧ ಭಾಗಗಳಲ್ಲಿ ಈ ಹೊಸ ಪ್ರಭೇದದ ಕಡಜವನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ.

ತಮಿಳುನಾಡಿನ ಮುಂಡಂತುರೈ ಹುಲಿ ಸಂರಕ್ಷಿತ ಪ್ರದೇಶದ ಕಾಲಕ್ಕಾಡ್, ಅರುಣಾಚಲ ಪ್ರದೇಶದ ಸಿಯಾಂಗ್ ಕಣಿವೆ ಮತ್ತು ಉತ್ತರಾಖಂಡದ ತೆಹ್ರಿಗಳಲ್ಲಿ ಹೊಸ ಜಾತಿಯ ಕಡಜಗಳನ್ನು ಪತ್ತೆ ಮಾಡಲಾಗಿದೆ.

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಂಡುಬಂದಿರುವ ಈ ಕಡಜಕ್ಕೆ ಕಿಂಗ್ ಕೋಬ್ರಾದ ಸಂಶೋಧನೆ ಮತ್ತು ಸಂರಕ್ಷಣೆಯಲ್ಲಿ ಕೆಲಸ ಮಾಡಿದ ಡಾ ಪಿ ಗೌರಿಶಂಕರ್ ಅವರ ಹೆಸರನ್ನು ಇಡಲಾಗಿದೆ. ಕೆಲವು ತಿಂಗಳ ಹಿಂದೆ ಇದೇ ಸಂಶೋಧಕರ ತಂಡವು ಹೊಸ ಜಾತಿಯ ಹಲ್ಲಿ ಮತ್ತು ಕಡಜವನ್ನು ಪತ್ತೆ ಮಾಡಿತ್ತು.

ಸಂಶೋಧಕ ಪ್ರಿಯದರ್ಶನನ್ ಧರ್ಮ ರಾಜನ್ ಅವರು ಮಾತನಾಡಿ, ಈ ಸಂಶೋಧನೆಗಳು ಭಾರತದಲ್ಲಿನ ಶ್ರೀಮಂತ ಜೀವವೈವಿಧ್ಯತೆ ಮತ್ತು ಪರಿಸರ ವ್ಯವಸ್ಥೆಗಳ ಪಾತ್ರಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಜೀವವೈವಿಧ್ಯತೆಯನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!