ಬಾಂಗ್ಲಾದೇಶಿ ಯುವಕ 
ರಾಜ್ಯ

ನಾನು ಬಾಂಗ್ಲಾದೇಶಿಗ, ಬೇಗೂರಿನಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿ ಇದ್ದೇವೆ; ನಮ್ಮ ಮತ ಕಾಂಗ್ರೆಸ್‌ಗೆ: ವೈರಲ್ ಆಯ್ತು ಯುವಕನ ವಿಡಿಯೋ!

ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಚಿಂದಿ ಆಯುತ್ತಿದ್ದ ಯುವಕನೋರ್ವನನ್ನು ಮಾತನಾಡಿಸುತ್ತಾರೆ. ನೀವು ಯಾರು ಎಂದು ಕೇಳಿದ್ದಕ್ಕೆ ಆ ಯುವಕ, ನಾನು ಬಾಂಗ್ಲಾದೇಶದವನು. ನಾನು ಇಲ್ಲಿ ಬೇಗೂರಿನಲ್ಲಿ ನೆಲೆಸಿದ್ದೇನೆ. ನನ್ನಂತೆ 3 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಮಂದಿ ಇಲ್ಲಿ ನೆಲೆಸಿದ್ದಾರೆ ಎಂದು ಹೇಳುತ್ತಾನೆ.

ಬೆಂಗಳೂರು: ಬೆಂಗಳೂರು ಪೊಲೀಸರ ದಿಟ್ಟ ಕಾರ್ಯಾಚರಣೆ ನಡೆದ ಹಲವು ಬಾಂಗ್ಲಾದೇಶಿಗರು, ರೋಹಿಂಗ್ಯ ಮುಸ್ಲಿಂರನ್ನು ಪತ್ತೆ ಹಚ್ಚುತ್ತಿದ್ದಾರೆ. ಅಲ್ಲದೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸಹ ನಾವು ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಅವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಇಲ್ಲವೆ ಗಡಿಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಆದರೆ ಅಂದುಕೊಳ್ಳುವುದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಬಾಂಗ್ಲಾದೇಶಿಗರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂಬುದಕ್ಕೆ ಇಲ್ಲೊಂದು ವಿಡಿಯೋ ಪ್ರತ್ಯಕ್ಷ ಸಾಕ್ಷಿಯಾಗಿ ಸಿಕ್ಕಿದೆ. ಹೌದು... ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಚಿಂದಿ ಆಯುತ್ತಿದ್ದ ಯುವಕನೋರ್ವನನ್ನು ಮಾತನಾಡಿಸುತ್ತಾರೆ. ನೀವು ಯಾರು ಎಂದು ಕೇಳಿದ್ದಕ್ಕೆ ಆ ಯುವಕ, ನಾನು ಬಾಂಗ್ಲಾದೇಶದವನು. ನಾನು ಇಲ್ಲಿ ಬೇಗೂರಿನಲ್ಲಿ ನೆಲೆಸಿದ್ದೇನೆ. ನನ್ನಂತೆ 3 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಮಂದಿ ಇಲ್ಲಿ ನೆಲೆಸಿದ್ದಾರೆ ಎಂದು ಹೇಳಿದ್ದಾನೆ.

ನಂತರ ಆ ವ್ಯಕ್ತಿ ನಿಮ್ಮ ಬಳಿ ದಾಖಲೆಗಳಿವೆಯಾ ಎಂದು ಕೇಳುತ್ತಾರೆ. ಅದಕ್ಕೆ ಯುವಕ ಹೌದು... ನಮ್ಮ ಬಳಿ ಆಧಾರ್ ಕಾರ್ಡ್ ಮತದಾರರ ಚೀಟಿಯೂ ಇದೆ. ನಾವು ಪ್ರತಿ ಬಾರಿಯೂ ಕಾಂಗ್ರೆಸ್ ಗೆ ಮತ ನೀಡುತ್ತೇವೆ ಎಂದು ಹೇಳುತ್ತಾನೆ. ನಮಗೆ ಸಲೀಂ ಎಂಬುವರು ಆಶ್ರಯ ನೀಡಿದ್ದಾರೆ ಎಂದು ಯುವಕ ಹೇಳಿದ್ದಾನೆ. ಆರ್ಗನೈಸರ್ ವೀಕ್ಲಿ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಅಪ್ಲೋಡ್ ಆಗಿದ್ದು ಇದೀಗ ಭಾರಿ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT