ಸಾಂದರ್ಭಿಕ ಚಿತ್ರ  
ರಾಜ್ಯ

ಬೆಂಗಳೂರು: ಬೈಯಪ್ಪನಹಳ್ಳಿ ರೋಟರಿ ಮೇಲ್ಸೇತುವೆ ಕಾಮಗಾರಿ ತೂಗುಗತ್ತಿಯಲ್ಲಿ!

IO ಸಿ ಜಂಕ್ಷನ್‌ನಲ್ಲಿ ಮೇಲ್ಸೇತುವೆಯನ್ನು ಫೆಬ್ರವರಿ 2024 ರ ಬಜೆಟ್‌ನಲ್ಲಿ 380 ಕೋಟಿ ರೂಪಾಯಿ ವೆಚ್ಚದಲ್ಲಿ (ಜಿಎಸ್‌ಟಿ ಸೇರಿದಂತೆ) ಮಂಜೂರು ಮಾಡಲಾಗಿದೆ. ಪ್ರಯಾಣಿಕರಿಗೆ ಎಸ್ ಎಂವಿಟಿ ನಿಲ್ದಾಣಕ್ಕೆ ಸುಲಭ ಪ್ರವೇಶವು ಪ್ರಮುಖ ಉದ್ದೇಶವಾಗಿತ್ತು.

ಬೆಂಗಳೂರು: ನಗರದ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬಳಿ ನಗರದ ಮೊದಲ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣದ ಗುತ್ತಿಗೆ ಕೆಲಸ ಅಂತಿಮಗೊಳ್ಳುವ ಬಗ್ಗೆ ಪ್ರಶ್ನೆಗಳೆದ್ದಿದೆ. ಎರಡನೆ ಸುತ್ತಿನ ಟೆಂಡರ್‌ನಲ್ಲಿ ಬಿಡ್‌ದಾರರು ಅತಿ ಹೆಚ್ಚಿನ ಬೆಲೆ ಸೂಚಿಸಿದ್ದರಿಂದ ಉಂಟಾಗುವ ತೊಡಕಿನಿಂದ ಹಿಡಿದು, ರಾಜ್ಯ ಸರ್ಕಾರವು ಕನಿಷ್ಟ ಬಿಡ್ ನ್ನು ಸ್ವೀಕರಿಸಲು ಅಥವಾ ಮರು-ಟೆಂಡರ್‌ಗೆ ಹೋಗಲು ಒತ್ತಾಯಿಸಬಹುದು. ಒಂದು ವಾರದಲ್ಲಿ ಸಚಿವ ಸಂಪುಟದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದು.

IOC ಜಂಕ್ಷನ್‌ನಲ್ಲಿ ಮೇಲ್ಸೇತುವೆಯನ್ನು ಫೆಬ್ರವರಿ 2024 ರ ಬಜೆಟ್‌ನಲ್ಲಿ 380 ಕೋಟಿ ರೂಪಾಯಿ ವೆಚ್ಚದಲ್ಲಿ (ಜಿಎಸ್‌ಟಿ ಸೇರಿದಂತೆ) ಮಂಜೂರು ಮಾಡಲಾಗಿದೆ. ಪ್ರಯಾಣಿಕರಿಗೆ ಎಸ್ ಎಂವಿಟಿ ನಿಲ್ದಾಣಕ್ಕೆ ಸುಲಭ ಪ್ರವೇಶವು ಪ್ರಮುಖ ಉದ್ದೇಶವಾಗಿತ್ತು.

ಹೆಚ್ಚುವರಿಯಾಗಿ, ಬಾಣಸವಾಡಿ, ಮಾರುತಿ ಸೇವಾ ನಗರ, ಕಾಮನಹಳ್ಳಿ, ರಾಮಮೂರ್ತಿ ನಗರ ಮತ್ತು ಬೈಯಪ್ಪನಹಳ್ಳಿ ನಿವಾಸಿಗಳು ಟ್ರಾಫಿಕ್ ದಟ್ಟಣೆಯ ಪರಿಹಾರದಿಂದ ಪ್ರಯೋಜನ ಪಡೆಯುತ್ತಾರೆ ಎಂದು ಸ್ಥಳೀಯರು ಹೇಳುತ್ತಾರೆ. ಮೇಲ್ಸೇತುವೆ 4.5 ಕಿ.ಮೀ ಉದ್ದದವರೆಗೆ ಸಾಗಲಿದ್ದು, ಮಾರುತಿ ಸೇವಾ ನಗರದಿಂದ ಬಾಣಸವಾಡಿ ಮುಖ್ಯ ರಸ್ತೆಗೆ ವೃತ್ತಾಕಾರದ ಜಂಕ್ಷನ್‌ನೊಂದಿಗೆ ಸಂಪರ್ಕ ಕಲ್ಪಿಸಲಿದೆ.

ಮೊದಲ ಸುತ್ತಿನ ಬಿಡ್ಡಿಂಗ್‌ನಲ್ಲಿ ಒಬ್ಬನೇ ಬಿಡ್‌ದಾರರಿದ್ದು, ಅದನ್ನು ರದ್ದುಗೊಳಿಸಬೇಕಾಗಿದ್ದರೆ, ಎರಡನೇ ಸುತ್ತಿನ ಟೆಂಡರ್‌ನಲ್ಲಿ ಬಿಡ್ ಸಲ್ಲಿಸಿದ ನಾಲ್ಕು ಕಂಪನಿಗಳು ದುಬಾರಿ ದರವನ್ನು ನಮೂದಿಸಿವೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗರ ಮೂಲದ ಸ್ಟಾರ್ ಇನ್‌ಫ್ರಾಸ್ಟ್ರಕ್ಚರ್, ದಿನೇಶ್ಚಂದ್ರ ಆರ್ ಅಗರವಾಲ್ ಇನ್‌ಫ್ರಾಕಾನ್, ಆರ್‌ಎನ್‌ಎಸ್ ಇನ್‌ಫ್ರಾಸ್ಟ್ರಕ್ಚರ್, ಸ್ಟಾರ್ ಇನ್ಫ್ರಾಸ್ಟ್ರಕ್ಚರ್ ಕಡಿಮೆ ಬಿಡ್ಡರ್ ಆಗಿ ಹೊರಹೊಮ್ಮಿದೆ. ಆದರೂ, ಸುಮಾರು 424 ಕೋಟಿ ರೂಪಾಯಿಗಳನ್ನು (ಜಿಎಸ್‌ಟಿ ಸೇರಿದಂತೆ) ಉಲ್ಲೇಖಿಸಿದ್ದಾರೆ, ಇದು ಬಿಬಿಎಂಪಿ ನಿಗದಿಪಡಿಸಿದ ಸ್ಟ್ಯಾಂಡರ್ಡ್ ದರಕ್ಕಿಂತ ಶೇಕಡಾ 24.1 ಹೆಚ್ಚಾಗಿದೆ, ಅಂದರೆ 380 ಕೋಟಿ ರೂಪಾಯಿಯಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ವರ್ಕ್ ಆರ್ಡರ್ ನೀಡಿದ 24 ತಿಂಗಳ ನಂತರ ಯೋಜನೆಯ ಗಡುವು ಮುಗಿಯಬೇಕು.

ಅದನ್ನು ಶೇಕಡಾ 11 ಕ್ಕೆ ಇಳಿಸಲು ನಾವು ಗುತ್ತಿಗೆದಾರರಿಗೆ ಮನವರಿಕೆ ಮಾಡಿದ್ದೇವೆ. ಅವರು ಒಪ್ಪಿಗೆ ನೀಡಿದ್ದಾರೆ. ಇದನ್ನು ಶೇಕಡಾ 10ಕ್ಕಿಂತ ಕಡಿಮೆ ಮಾಡಲು ಸರ್ಕಾರ ಬಯಸುತ್ತದೆ. ಹೀಗಾಗಿ, ಈ ಮಾತುಕತೆಯಿಂದಾಗಿ ಗುತ್ತಿಗೆ ನೀಡುವುದು ವಿಳಂಬವಾಗಿದೆ ಎಂದು ಮತ್ತೊಬ್ಬ ಅಧಿಕಾರಿ ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT