ವಿಧಾನಸಭೆಯಲ್ಲಿ ಡಿ ಕೆ ಶಿವಕುಮಾರ್ 
ರಾಜ್ಯ

ನನ್ನ ಇಲಾಖೆ ಬಜೆಟ್ ಇರುವುದು 16 ಸಾವಿರ ಕೋಟಿ ರೂ ಮಾತ್ರ; ಮಲ್ಲಾಬಾದ್ ಏತ ನೀರಾವರಿ ಯೋಜನೆಗೆ ಶೀಘ್ರವೇ ಟೆಂಡರ್: ಡಿ.ಕೆ ಶಿವಕುಮಾರ್

ಬೊಮ್ಮಾಯಿ ಅವರ ಸರ್ಕಾರದ ಬಜೆಟ್ ನಲ್ಲಿ ನೀರಾವರಿ ಇಲಾಖೆಗೆ 22 ಸಾವಿರ ಕೋಟಿ ಅನುದಾನ ನೀಡಿದ್ದರು. ಆದರೆ ನಿಗಮಗಳಲ್ಲಿ 28 ಸಾವಿರ ಕೋಟಿ ಮೊತ್ತದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿತ್ತು.

ಬೆಳಗಾವಿ: ಶೀಘ್ರದಲ್ಲೇ ಮಲ್ಲಾಬಾದ್ ಏತ ನೀರಾವರಿ ಯೋಜನೆ ಟೆಂಡರ್ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯರಾದ ಬಿ.ಜಿ. ಪಾಟೀಲ್ ಅವರು ಕಲಬುರ್ಗಿ ಮಲ್ಲಾಬಾದ್ ಏತ ನೀರಾವರಿ ಯೋಜನೆ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಕೂಡಲೇ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು ಎಂದು ಬುಧವಾರ ಗಮನ ಸೆಳೆದರು. ಈ ವೇಳೆ ಮಾತನಾಡಿದ ನೀರಾವರಿ ಸಚಿವರೂ ಆದ ಶಿವಕುಮಾರ್ ಅವರು, “ಬಿ.ಜಿ. ಪಾಟೀಲ್ ಅವರ ಬೇಡಿಕೆ ಸರಿಯಾಗಿದೆ. ಬೊಮ್ಮಾಯಿ ಅವರ ಸರ್ಕಾರದ ಬಜೆಟ್ ನಲ್ಲಿ ನೀರಾವರಿ ಇಲಾಖೆಗೆ 22 ಸಾವಿರ ಕೋಟಿ ಅನುದಾನ ನೀಡಿದ್ದರು. ಆದರೆ ನಿಗಮಗಳಲ್ಲಿ 28 ಸಾವಿರ ಕೋಟಿ ಮೊತ್ತದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಕೆಲಸ ಮಾಡಿಸಿ ಬಿಲ್ ಪಾವತಿ ಮಾಡದಿದ್ದರೆ ಅನಗತ್ಯ ಒತ್ತಡ ಬೀಳಲಿದೆ. ಕೇಂದ್ರ ಸರ್ಕಾರದಿಂದ ನಮಗೆ ಬರಬೇಕಾಗಿರುವ 5400 ಕೋಟಿ ಹಣ ಬಂದಿಲ್ಲ. ಹೀಗಾಗಿ ನಮ್ಮ ಬಜೆಟ್ ನಲ್ಲಿ ಇದನ್ನು 16 ಸಾವಿರ ಕೋಟಿಗೆ ಇಳಿಸಲಾಗಿದೆ. ಕೋಲಾರದ ಎತ್ತಿನ ಹೊಳೆ ಯೋಜನೆ ಪರಿಸ್ಥಿತಿಯೂ ಹೀಗೆ ಇದೆ. ತುಮಕೂರಿಗೆ ನೀರು ಬರುವವರೆಗೂ ಕಾಮಗಾರಿ ಕೈಗೆತ್ತಿಕೊಳ್ಳದಂತೆ ತಡೆಹಿಡಿಯಲಾಗಿದೆ ಎಂದರು.

ಮೊನ್ನೆಯಷ್ಟೇ ಕೃಷ್ಣ ಮೇಲ್ದಂಡೆ ಯೋಜನೆ ವಿಚಾರವಾಗಿ ನಮ್ಮ ಮೇಲೆ ಒತ್ತಡ ಹಾಕಿದ್ದಾರೆ. ಈಗಾಗಲೇ ರಾಜ್ಯದಲ್ಲಿ 1.50 ಲಕ್ಷ ಕೋಟಿ ಮೊತ್ತದ ನೀರಾವರಿ ಯೋಜನೆ ಕೆಲಸಗಳು ನಡೆಯುತ್ತಿವೆ. ಆದರೆ ನನ್ನ ಇಲಾಖೆ ಬಜೆಟ್ ಇರುವುದು 16 ಸಾವಿರ ಕೋಟಿ ಮಾತ್ರ, ಇದರಲ್ಲಿ ಶೇ.50 ರಷ್ಟು ಹಣ ಹಳೆ ಸಾಲಕ್ಕೆ ಪಾವತಿಯಾಗುತ್ತಿದೆ. ಶೇ.25 ಹಣ ಭೂಸ್ವಾಧೀನ ಪ್ರಕ್ರಿಯೆಗೆ ಹೋಗುತ್ತದೆ. ಇನ್ನು ಶೇ.25 ಹಣ ಮಾತ್ರ ಉಳಿಯುತ್ತದೆ. ಈ ಯೋಜನೆ ನಮ್ಮ ಗಮನದಲ್ಲಿದೆ. ನಿಮ್ಮ ಕಾಲದಲ್ಲಿ 130 ಕೋಟಿ ವೆಚ್ಚದ ಈ ಯೋಜನೆಗೆ ಅನುಮತಿ ನೀಡಲಾಗಿದ್ದು, ನಾವು ಮಾತು ಕೊಟ್ಟಿದ್ದು, ಈ ಯೋಜನೆಯನ್ನು ಶೀಘ್ರ ಕೈಗೆತ್ತಿಕೊಳ್ಳುತ್ತೇವೆ” ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT