ಸಿಟಿ ರವಿ 
ರಾಜ್ಯ

ಅಶ್ಲೀಲ ಪದ ಬಳಕೆ ಪ್ರಕರಣ: ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಹಿಸಿದೆ.

ಹೀಗಾಗಿ ಸಿಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಸಿಟಿ ಕಾರನ್ನು ಹಿಂಬಾಲಿಸಿಕೊಂಡು ಬರುತ್ತಿದ್ದಾರೆ.

ಇಂದು ಬೆಳಗ್ಗೆ ಹಿರೇಬಾಗೇವಾಡಿ ಪೊಲೀಸರು ಸಿಟಿ ರವಿ ಅವರನ್ನು ಬೆಳಗಾವಿ ಕೋರ್ಟ್‌ಗೆ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ಸಿಟಿ ರವಿ ಪರ ವಕೀಲರಾದ ಎಂಬಿ ಜಿರಲಿ ಅವರು ಜಾಮೀನು ನೀಡುವಂತೆ ಮನವಿ ಮಾಡಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿಗಳು ಆದೇಶ ಕಾಯ್ದಿರಿಸಿದ್ದರು. ಇನ್ನು ತನಿಖಾಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆದೊಯ್ಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಬೆಳಗಾವಿ ಕೋರ್ಟ್ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಲಯಕ್ಕೆ ವರ್ಗಾಹಿಸಿದೆ.

ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡು ಇದನ್ನು ಚಿತ್ರೀಕರಿಸಿಕೊಂಡಿದ್ದಾರೆ. ನಾನು ಸಚಿವೆ ವಿರುದ್ಧ ಯಾವುದೇ ರೀತಿಯ ಅಶ್ಲೀಲ ಪದ ಬಳಸಿಲ್ಲ. ಮಹಿಳೆಯರ ಬಗ್ಗೆ ನನಗೆ ಗೌರವಿದೆ. ಯಾರೋ ಹೇಳಿದ ಹೇಳಿಕೆ ಕೇಳಿ ನನ್ನ ಮೇಲೆ ಸಚಿವೆ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಟಿ ರವಿ ಹೇಳಿಕೆ ನೀಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT