ಸಿಟಿ ರವಿ 
ರಾಜ್ಯ

ಅಶ್ಲೀಲ ಪದ ಬಳಕೆ ಪ್ರಕರಣ: ಕೋರ್ಟ್ ಮುಂದೆ BJP MLC ಸಿಟಿ ರವಿ ಹಾಜರು, ವಿಚಾರಣೆ ಮಧ್ನಾಹ್ನ 3 ಗಂಟೆಗೆ ಮುಂದೂಡಿಕೆ!

ರವಿ ಪರ ವಕೀಲ ಎಂಬಿ ಜಿರಲಿ ವಾದ ಮಂಡಿಸಿದರು. ಅಲ್ಲದೆ ಜಾಮೀನು ನೀಡುವಂತೆ ಮನವಿ ಮಾಡಿದರು. ಇದೀಗ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗುವ ವಿಚಾರಣೆ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲರು ವಾದ ಮಂಡಿಸಲಿದ್ದಾರೆ.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬೆಳಗಾವಿಯ ಜೆಎಂಎಫ್ಸಿ ಕೋರ್ಟ್ ಮುಂದೆ ಹಾಜರುಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಫ್ಐಆರ್ ದಾಖಲಿಸಿದ್ದ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದರು. ಇಂದು ಜೆಎಂಎಫ್ಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದು ನ್ಯಾಯಮೂರ್ತಿಗಳು ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

ರವಿ ಪರ ವಕೀಲ ಎಂಬಿ ಜಿರಲಿ ವಾದ ಮಂಡಿಸಿದರು. ಅಲ್ಲದೆ ಜಾಮೀನು ನೀಡುವಂತೆ ಮನವಿ ಮಾಡಿದರು. ಇದೀಗ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗುವ ವಿಚಾರಣೆ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲರು ವಾದ ಮಂಡಿಸಲಿದ್ದಾರೆ. ಆನಂತರ ಜಾಮೀನು ತೀರ್ಪು ನೀಡುವ ಸಾಧ್ಯತೆ ಇದೆ.

ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡು ಇದರ ಚಿತ್ರೀಕರಣ ಮಾಡಲಾಗಿದೆ. ನಾನು ಸಚಿವೆ ವಿರುದ್ಧ ಯಾವುದೇ ರೀತಿಯ ಅಶ್ಲೀಲ ಪದ ಬಳಸಿಲ್ಲ. ಮಹಿಳೆಯರ ಬಗ್ಗೆ ನನಗೆ ಗೌರವಿದೆ. ಯಾರೋ ಹೇಳಿದ ಹೇಳಿಕೆ ಕೇಳಿ ನನ್ನ ಮೇಲೆ ಸಚಿವೆ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಟಿ ರವಿ ಹೇಳಿಕೆ ನೀಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT