ಡಿಜಿಟಲ್ ಅರೆಸ್ಟ್ (ಸಾಂಕೇತಿಕ ಚಿತ್ರ)  online desk
ರಾಜ್ಯ

ಡಿಜಿಟಲ್​ ಅರೆಸ್ಟ್​: ಬೆಂಗಳೂರಿನ ಟೆಕ್ಕಿಗೆ ಬರೋಬ್ಬರಿ 11.8 ಕೋಟಿ ರೂ. ವಂಚನೆ!

ವಂಚನೆಗೊಳಗಾದ ಸುಭಾಷ್(ಹೆಸರು ಬದಲಾಯಿಸಲಾಗಿದೆ) ಅವರು ರಾಜಧಾನಿ ಬೆಂಗಳೂರಿನ ಹೆಬ್ಬಾಳ ಸಮೀಪದ ಜಿಕೆವಿಕೆ ಲೇಔಟ್ ನಿವಾಸಿಯಾಗಿದ್ದು, ನವೆಂಬರ್ 25 ರಿಂದ ಡಿಸೆಂಬರ್ 15ರ ನಡುವೆ ಹಣ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಬೆಂಗಳೂರು: ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್​ ಅರೆಸ್ಟ್ ಮೂಲಕ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಬರೋಬ್ಬರಿ 11.8 ಕೋಟಿ ರೂ. ವಂಚಿಸಲಾಗಿದೆ.

ವಂಚನೆಗೊಳಗಾದ ಸುಭಾಷ್(ಹೆಸರು ಬದಲಾಯಿಸಲಾಗಿದೆ) ಅವರು ರಾಜಧಾನಿ ಬೆಂಗಳೂರಿನ ಹೆಬ್ಬಾಳ ಸಮೀಪದ ಜಿಕೆವಿಕೆ ಲೇಔಟ್ ನಿವಾಸಿಯಾಗಿದ್ದು, ನವೆಂಬರ್ 25 ರಿಂದ ಡಿಸೆಂಬರ್ 15ರ ನಡುವೆ ಹಣ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ತಾವು ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರೆಂದು ಹೇಳಿಕೊಂಡು ಸೈಬರ್​ ವಂಚಕರು ಸುಭಾಷ್ ಅವರಿಗೆ ಕರೆ ಮಾಡಿದ್ದಾರೆ. “ಮುಂಬೈನ ಕೊಲಾಬಾದಲ್ಲಿ ನಿಮ್ಮ ಮೇಲೆ ಪ್ರಕರಣವೊಂದು ದಾಖಲಾಗಿದೆ. ನಿಮ್ಮ ಆಧಾರ್ ಕಾರ್ಡ್​ ಬಳಸಿಕೊಂಡು ಹಣ ವರ್ಗಾವಣೆಯಾಗಿದೆ. 6 ಕೋಟಿ ರೂ. ವಂಚನೆಯಾಗಿದೆ. ಈಗ ಕೇಸ್​ ಸುಪ್ರೀಂಕೋರ್ಟ್​​ನಲ್ಲಿ ಇದೆ ಎಂದು ಹೆದರಿಸಿದ್ದಾರೆ.

ಬಳಿಕ, ವಂಚಕರು ವಿಡಿಯೋ ಕಾಲ್ ಮಾಡಿ ಒಂದು‌ ತಿಂಗಳ ಕಾಲ ಸುಭಾಷ್​ ಅವರನ್ನು ಡಿಜಿಟಲ್ ಅರೆಸ್ಟ್ (Digital Arrest) ಮಾಡಿದ್ದಾರೆ. ಒಂದು ತಿಂಗಳ ಕಾಲ ಮನೆಯಲ್ಲಿ ಇರದಂತೆ ಹೇಳಿದ್ದಾರೆ. ಹೀಗಾಗಿ ಅವರು ಯಲಹಂಕದ ಲಾಡ್ಜ್​ವೊಂದರಲ್ಲಿ ಇದ್ದರು.

ಸುಭಾಷ್ ಅವರು ಕಳೆದ ಹಲವು ವರ್ಷಗಳಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಇದನ್ನೇ ಟಾರ್ಗೆಟ್​ ಮಾಡಿದ ಸೈಬರ್ ವಂಚಕರು ಟೆಕ್ಕಿ ವಿನಯ್​ ಕುಮಾರ್​ ಅವರಿಂದ ಷೇರುಗಳನ್ನು ಮಾರಾಟ ಮಾಡಿಸಿದ್ದಾರೆ. ಬಳಿಕ ಹಂತ ಹಂತವಾಗಿ ಒಂದು ತಿಂಗಳ ಕಾಲ ಅವರಿಂದ 11 ಕೋಟಿ 83 ಲಕ್ಷ ರೂ. ಅನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಈ ಸಂಬಂಧ ಬೆಂಗಳೂರಿನ ಈಶಾನ್ಯ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ

ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ: ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಬೆಂಗಳೂರು: ಮನೆ ಬಳಿ ಆಟವಾಡ್ತಿದ್ದ ಬಾಲಕನಿಗೆ 'ಕಾಲಿನಿಂದ ಒದ್ದು' ವಿಕೃತಿ! ಪಕ್ಕದ ಮನೆಯ ಆರೋಪಿ ಬಂಧನ, ಬಿಡುಗಡೆ

ಸಂಸತ್ ಅಧಿವೇಶನಕ್ಕೆ ತೆರೆ: ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Video: "ಉಸಿರಾಡಲು ಆಗುತ್ತಿಲ್ಲ"; ಕಸದ ಬಿಸಿಗೆ ರೊಚ್ಚಿಗೆದ್ದ ಐಂದ್ರಿತಾ ರೇ; ಮುನಿರತ್ನಗೆ ಟ್ಯಾಗ್ ಮಾಡಿ ಆಕ್ರೋಶ!

SCROLL FOR NEXT