ಸಭಾಪತಿ ಬಸವರಾಜ ಹೊರಟ್ಟಿ (ಸಂಗ್ರಹ ಚಿತ್ರ) 
ರಾಜ್ಯ

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ, ಪೊಲೀಸರ ಹಸ್ತಕ್ಷೇಪ ಒಪ್ಪಲಾಗದು: ಸಭಾಪತಿ ಬಸವರಾಜ ಹೊರಟ್ಟಿ

ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಪರಿಷತ್ತಿನ ಒಳಗೆ ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ನಮ್ಮ ಬಳಿ ವಿಡಿಯೋ ಮತ್ತು ಆಡಿಯೋ ರೆಕಾರ್ಡಿಂಗ್ ಲಭ್ಯವಿದ್ದರೆ ಈ ವಿಷಯವನ್ನು ಪರಿಗಣಿಸಲಾಗುವುದು.

ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರು ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಈ ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಹೇಳನಕಾರಿ ಮಾತುಗಳನ್ನಾಡಿರುವುದು ಮುಗಿದ ಅಧ್ಯಾಯವಾಗಿದೆ. ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ನಡೆದ ಘಟನೆಯನ್ನು ಕೂಲಂಕಷವಾಗಿ ಚರ್ಚಿಸಲಾಗಿದೆ ಎಂದು ಹೇಳಿದರು.

'ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬಂಧಿಸಲಾಗಿದೆ. ಸದ್ಯ, ನಾವು ಎರಡೂ ಕಡೆಯಿಂದ ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ. ಈ ಬಗ್ಗೆ ದೂರು ನೀಡಿದರೆ, ನಾವು ಕ್ರಮ ಕೈಗೊಳ್ಳುತ್ತೇವೆ. ಪರಿಷತ್ತಿನ ಒಳಗೆ ನಡೆದ ಘಟನೆಯಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಬಾರದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ' ಎಂದರು.

'ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಪರಿಷತ್ತಿನ ಒಳಗೆ ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ನಮ್ಮ ಬಳಿ ವಿಡಿಯೋ ಮತ್ತು ಆಡಿಯೋ ರೆಕಾರ್ಡಿಂಗ್ ಲಭ್ಯವಿದ್ದರೆ ಈ ವಿಷಯವನ್ನು ಪರಿಗಣಿಸಲಾಗುವುದು. ಬೇರೆ ಯಾವುದೇ ಪಕ್ಷವು ವಿಡಿಯೋ ಅಥವಾ ಆಡಿಯೋ ಒದಗಿಸಿದರೆ, ನಾವು ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸುತ್ತೇವೆ. ಆ ದಿನ ಅಧಿವೇಶನ ಮುಗಿದ ನಂತರ ಯಾವುದೇ ವಿಡಿಯೋ ರೆಕಾರ್ಡಿಂಗ್ ಮಾಡಿಲ್ಲ' ಎಂದು ಹೇಳಿದರು.

ಸಚಿವರ ವಿರುದ್ಧ ಬಿಜೆಪಿ ಎಂಎಲ್‌ಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣವನ್ನು ‘ನೈತಿಕ ಸಮಿತಿ’ಗೆ ಒಪ್ಪಿಸಿ, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೊರಟ್ಟಿ ಈ ಹಿಂದೆ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ