ಶಾಸಕ ವೇದವ್ಯಾಸ್ ಕಾಮತ್ ,ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ 
ರಾಜ್ಯ

ಮಂಗಳೂರು: ಮೊಟ್ಟಮೊದಲ 'ರೋಬೋಟಿಕ್ ಬಟರ್‌ಫ್ಲೈ' ಶೋಗೆ ಚಾಲನೆ

ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.

ಮಂಗಳೂರು: ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ನಡೆಯುವ ಒಂದು ತಿಂಗಳ ಕರಾವಳಿ ಉತ್ಸವದ ಅಂಗವಾಗಿ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಿರುವ ಮೊಟ್ಟ ಮೊದಲ 'ರೋಬೋಟಿಕ್ ಬಟರ್‌ಫ್ಲೈ ಶೋ' ಅನ್ನು ಶಾಸಕ ವೇದವ್ಯಾಸ್ ಕಾಮತ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭಾನುವಾರ ಉದ್ಘಾಟಿಸಿದರು.

ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಚಿಟ್ಟೆಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಚಿಟ್ಟೆಗಳ ಸಂರಕ್ಷಣೆ ಹಾಗೂ ಪರಿಸರ ಸಮತೋಲನ ಕುರಿತು ಜಾಗೃತಿ ಮೂಡಿಸಲು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಮಂಗಳೂರಿಗರು ಪ್ರಥಮ ಬಾರಿಗೆ ಇಂತಹ ಪ್ರದರ್ಶನ ವೀಕ್ಷಿಸಲು ಉತ್ತಮ ಅವಕಾಶವಿದ್ದು, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರ ಯೋಜನೆಯಂತೆ ಕರಾವಳಿ ಉತ್ಸವ ಆಚರಣೆಯ ಅಂಗವಾಗಿ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಅಪರೂಪದ ಚಿಟ್ಟೆಗಳನ್ನು ಪ್ರದರ್ಶಿಸಲಾಗುತ್ತಿದ್ದು, ಮಕ್ಕಳಿಗೆ ಅವುಗಳ ಬಗ್ಗೆ ತಿಳಿದುಕೊಳ್ಳಲು ಉತ್ತಮ ಅವಕಾಶವಿದೆ. ಪ್ರದರ್ಶನದಲ್ಲಿ ಶಾಲಾ ಮಕ್ಕಳಿಗೆ ಶೇಕಡಾ 50 ರಷ್ಟು ರಿಯಾಯಿತಿ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT