ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ಆಟೋ ದರ ಏರಿಕೆ; ಪ್ರತಿ ಕಿ.ಮೀಗೆ 5 ರೂ. ಹೆಚ್ಚಳ ಸಾಧ್ಯತೆ!

ಪ್ರತಿ ಒಂದು ಕಿಲೋ ಮೀಟರ್ ದೂರಕ್ಕೆ 15-20 ರೂಪಾಯಿ ಮತ್ತು 2 ಕಿಲೋ ಮೀಟರ್ ದೂರಕ್ಕೆ 30-40 ರೂಪಾಯಿಗೆ ದರ ಪರಿಷ್ಕರಿಸುಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಹೊಸ ವರ್ಷಕ್ಕೆ ಜನ ಸಾಮಾನ್ಯರಿಗೆ ಆಟೋ ದರ ಏರಿಕೆ ಶಾಕ್ ಸಿಗುವ ಸಾಧ್ಯತೆ ದಟ್ಟವಾಗುತ್ತಿದೆ. ಪ್ರತಿ ಒಂದು ಕಿಲೋ ಮೀಟರ್ ಗೆ 5 ರೂಪಾಯಿವರೆಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

ತೈಲಬೆಲೆ ಏರಿಕೆ, ಬಿಡಿಭಾಗಗಳ ಬೆಲೆ ಏರಿಕೆ, ದೈನಂದಿನ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ, ಆಟೋ ಮಿನಿಮಮ್ ದರವನ್ನು ಏರಿಸಬೇಕೆಂದು ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಆಗ್ರಹಿಸುತ್ತಿದ್ದಾರೆ.

ಪ್ರತಿ ಒಂದು ಕಿಲೋ ಮೀಟರ್ ದೂರಕ್ಕೆ 15 ರೂಪಾಯಿಂದ 20 ರೂಪಾಯಿಗೆ ಮತ್ತು 2 ಕಿಲೋ ಮೀಟರ್ ದೂರಕ್ಕೆ 30 ರೂಪಾಯಿಯಿಂದ 40 ರೂಪಾಯಿಗೆ ದರ ಪರಿಷ್ಕರಿಸುವಂತೆ ಒತ್ತಾಯಿಸಿದ್ದಾರೆ.

ದರ ಪರಿಷ್ಕರಣೆ ಕುರಿತು ಸೋಮವಾರ ರಾಜ್ಯ ಸಾರಿಗೆ ಇಲಾಖೆ ಹಾಗೂ ಆಟೋ ಯೂನಯನ್ ಗಳು ಸಭೆ ನಡೆಯಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಗಿದ್ದು, ಪ್ರಯಾಣ ದರ ಹೆಚ್ಚಳ ಬೇಡಿಕೆ ಪರಿಗಣನೆಯಾಗುವ ಸಾಧ್ಯತೆ ಎಂದು ಸಾರಿಗೆ ಇಲಾಖೆ ಮೂಲಗಳಉ ತಿಳಿಸಿವೆ.

ಆಟೋರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರ ಮೂರ್ತಿ ಮಾತನಾಡಿ, 2021 ರಲ್ಲಿ ದರಗಳನ್ನು ಪರಿಷ್ಕರಿಸಲಾಗಿತ್ತು. ಆಟೋಗಳ ಕಾರ್ಯಾಚರಣೆಯ ವೆಚ್ಚವು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಇಂಧನ, ಬಿಡಿಭಾಗಗಳು ಮತ್ತು ಟೈರ್‌ಗಳ ಬೆಲೆ, ಕಾರ್ಯಾಚರಣೆಯ ವೆಚ್ಚವು ಹೆಚ್ಚುತ್ತಿದೆ. ಆದರೆ, ದರ ಮಾತ್ರ ಎಂದಿನಂತೆಯೇ ಇದೆ ಎಂದು ಹೇಳಿದ್ದಾರೆ.

ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಎಂ.ಮಂಜುನಾಥ್ ಮಾತನಾಡಿ, ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಶಾಲಾ ಶುಲ್ಕ, ಆಸ್ಪತ್ರೆ ವೆಚ್ಚ ಹೀಗೆ ಎಲ್ಲದರಲ್ಲೂ ಏರಿಕೆಯಾಗಿದೆ. ಆಟೋ ಚಾಲಕರು ತಮ್ಮ ಕುಟುಂಬವನ್ನು ಹೇಗೆ ನಡೆಸಬೇಕು? ಹಲವಾರು ಚಾಲಕರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಬಡ್ಡಿ ಪಾವತಿಸಲು ಹೆಣಗಾಡುತ್ತಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ನೌಕರರ ವೇತನವನ್ನು ನಿಯಮಿತವಾಗಿ ಪರಿಷ್ಕರಿಸಲಾಗುತ್ತದೆ. ಆಟೋ ಚಾಲಕರು ಕೇವಲ ಮೀಟರ್ ದರವನ್ನು ಅವಲಂಬಿಸಿರುತ್ತಾರೆ. ಹೆಚ್ಚುತ್ತಿರುವ ವೆಚ್ಚಗಳಿಗೆ ಅನುಗುಣವಾಗಿ ದರಗಳ ನಿಯಮಿತ ಪರಿಷ್ಕರಣೆಯನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ಆಟೋ ಚಾಲಕರು ತಮ್ಮ ಗೃಹಿಣಿಯರಿಗೆ ಪ್ರತಿದಿನ 100 ರೂಪಾಯಿ ನೀಡಿ ಸ್ವಲ್ಪ ಹಣವನ್ನು ಉಳಿಸುತ್ತಿದ್ದರು. ಆದರೆ, ಈಗ ಹೆಚ್ಚುತ್ತಿರುವ ದೈನಂದಿನ ವೆಚ್ಚದಿಂದ ಕುಟುಂಬದವರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದಂತಾಗಿದೆ ಎಂದು ತಿಳಿಸಿದ್ದಾರೆ.

ಮಂಗಳೂರು, ಉಡುಪಿ ಮತ್ತು ಶಿವಮೊಗ್ಗದಲ್ಲಿ ಆಟೋ ದರವನ್ನು ಪರಿಷ್ಕರಿಸಲಾಗಿದೆ. ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಆಟೋ ಚಾಲಕರ ಮೇಲೆ ತೀವ್ರ ಪರಿಣಾಮ ಬೀರಿದೆ. ಬೈಕ್ ಟ್ಯಾಕ್ಸಿ ವಿಚಾರ ಹೈಕೋರ್ಟ್ ಅಂಗಳದಲ್ಲಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದ ನಂತರ ದರವನ್ನು ಪರಿಷ್ಕರಿಸಬೇಕು ಎಂದು ಕೆಲ ಆಟೋ ಚಾಲಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT