ಕೊತ್ತನೂರಿನ ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹದಗೆಟ್ಟ ರಸ್ತೆ, ಚರಂಡಿ ತುಂಬಿ ಹರಿಯುವ ನೀರು; ಪರಿತಪ್ಪಿಸುತ್ತಿರುವ ಕೊತ್ತನೂರು ನಿವಾಸಿಗಳು!

ಈ ಪ್ರದೇಶದ ರಸ್ತೆಗಳು ಭಯಾನಕ ಸ್ಥಿತಿಯಲ್ಲಿವೆ. ಮಳೆಯ ಸಮಯದಲ್ಲಿ ಹೊಂಡಗಳು ಮತ್ತು ನೀರು ತುಂಬುವುದರಿಂದ ಪ್ರಯಾಣವು ಅತ್ಯಂತ ಅಪಾಯಕಾರಿಯಾಗಿದೆ.

ಬೆಂಗಳೂರು: ಗುಂಡಿಗಳಿಂದ ಕೂಡಿದ ರಸ್ತೆಗಳು, ಮುಚ್ಚಿಹೋಗಿರುವ ಚರಂಡಿಗಳು, ತುಂಬಿ ಹರಿಯುತ್ತಿರುವ ತ್ಯಾಜ್ಯ ನೀರು, ತೆರೆದ ಚರಂಡಿಯಿಂದ ದುರ್ವಾಸನೆ, ಹೆಚ್ಚುತ್ತಿರುವ ಮಾಲಿನ್ಯದಿಂದ ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯದ ಕೆಆರ್ ಪುರಂ ವಿಧಾನಸಭಾ ಕ್ಷೇತ್ರದ ಹೊರಮಾವು ವಾರ್ಡ್‌ನಲ್ಲಿರುವ ಕೊತ್ತನೂರಿನ ಜನರ ಬದುಕು ಹೇಳತೀರದಂತಾಗಿದೆ.

ಅಲ್ಲದೆ, ಅಪೂರ್ಣ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಸುರಿಯುತ್ತಿದ್ದು, ಆಗಾಗ್ಗೆ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಕಿರಿದಾದ, ಗುಂಡಿಗಳಿಂದ ಕೂಡಿದ ರಸ್ತೆಗಳು, ಮಳೆಯ ಸಮಯದಲ್ಲಿ ನೀರಿನೊಂದಿಗೆ ಸೇರಿ, ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರಿಗೆ, ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ದಿನನಿತ್ಯ ಅಪಾಯವನ್ನುಂಟು ಮಾಡುತ್ತಿದೆ. ಈ ಕುರಿತು ವಾರ್ಡ್ ಎಂಜಿನಿಯರ್‌ಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಕಳೆದ ಮೂರು ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ದೂರುತ್ತಾರೆ.

ಈ ಪ್ರದೇಶದ ರಸ್ತೆಗಳು ಭಯಾನಕ ಸ್ಥಿತಿಯಲ್ಲಿವೆ. ಮಳೆಯ ಸಮಯದಲ್ಲಿ ಹೊಂಡಗಳು ಮತ್ತು ನೀರು ತುಂಬುವುದರಿಂದ ಪ್ರಯಾಣವು ಅತ್ಯಂತ ಅಪಾಯಕಾರಿಯಾಗಿದೆ. ಪದೇ ಪದೇ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ" ಎಂದು ಹೊರಮಾವು ನಿವಾಸಿ ವರ್ಖೆ ಥಾಮಸ್ TNIE ಗೆ ಹೇಳಿದರು.

ಮತ್ತೋರ್ವ ನಿವಾಸಿ ಉಮೇಶ್ ಬಾಬು, "ಬಿಬಿಎಂಪಿಗೆ ಯಾವುದೇ ಚುನಾವಣೆ ನಡೆಯದೆ ಕೊತ್ತನೂರಿನ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ಸರಿಯಾದ ಆಡಳಿತ ಇಲ್ಲದೆ ನಿವಾಸಿಗಳು ಪರಿತಪಿಸುತ್ತಿದ್ದಾರೆ ಎಂದು ತಿಳಿಸಿದರು. ಇದಲ್ಲದೆ ಗಾಳಿಯ ಗುಣಮಟ್ಟBG ಹದಗೆಟ್ಟಿದೆ. ನಿರ್ಮಾಣದ ಅವಶೇಷಗಳಿಂದ ಧೂಳು ಮತ್ತು ವಾಹನಗಳ ಹೊರಸೂಸುವಿಕೆ ಮಾಲಿನ್ಯವನ್ನು ಹೆಚ್ಚಿಸುತ್ತಿದ್ದು, ಉಸಿರಾಟ ಹಾಗೂ ಅಲರ್ಜಿ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ನಿವಾಸಿಗಳು ಅಳಲು ತೋಡಿಕೊಂಡರು.

ಕೊತ್ತನೂರು ಮತ್ತು ಹೊರಮಾವು ನಿವಾಸಿಗಳು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ನಮಗೆ ಅರಿವಿದ್ದು, ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಿದ್ದು, ಗುಂಡಿ ತೋಡುವ ಕಾರ್ಯವನ್ನು ವ್ಯವಸ್ಥಿತವಾಗಿ ಆರಂಭಿಸಲಾಗುವುದು. ರಸ್ತೆ ಮತ್ತು ಫುಟ್‌ಪಾತ್‌ಗಳಲ್ಲಿ ಕಸ ಸುರಿಯದಂತೆ ಎಚ್ಚರಿಕೆ ವಹಿಸುವುದಾಗಿ ಕೆಆರ್ ಪುರ ಉಪವಿಭಾಗದ ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ ಎಂ. ಚನ್ನಬಸಪ್ಪ ಭರವಸೆ ನೀಡಿದರು. ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು ಮತ್ತು ಕೊತ್ತನೂರಿನಲ್ಲಿ ಸುಸ್ಥಿರ ನಗರಾಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT