20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ ಗಳಿಗೆ ಚಾಲನೆ 
ರಾಜ್ಯ

KSRTC: 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ ಸೇವೆಗೆ

ಇಂದು ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂಭಾಗ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳಿಗೆ ಚಾಲನೆ ನೀಡಲಾಯಿತು.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ಗಳಿಗೆ ಮಂಗಳವಾರ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

ಇಂದು ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂಭಾಗ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳಿಗೆ ಚಾಲನೆ ನೀಡಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಎರಡು ತಿಂಗಳ ಮುಂಚೆ 20 ವೋಲ್ವೋ ಬಸ್​ಗಳಿಗೆ ಚಾಲನೆ ನೀಡಲಾಗಿತ್ತು. ಅಂಬಾರಿ ಉತ್ಸವ ಸ್ಲೀಪರ್​ ಬಸ್​ಗಳಿಗೆ ಇವತ್ತು ಚಾಲನೆ ನೀಡಿದ್ದೇವೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರರಾಜ್ಯಗಳಿಗೆ ಈ ಬಸ್​ಗಳು ಸಂಚಾರ ಮಾಡುತ್ತವೆ ಎಂದರು.

ಇದೇ ವೇಳೆ ಹುಮನಾಬಾದ್ ತರಬೇತಿ ಕೇಂದ್ರದಲ್ಲಿ ನಡೆದ ಚಾಲನಾ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 82 ಅಭ್ಯರ್ಥಿಗಳಿಗೆ ಚಾಲಕ ಕಮ್ ಕಂಡಕ್ಟರ್‌ಗಳ ತಾತ್ಕಾಲಿಕ ನೇಮಕಾತಿ ಆದೇಶವನ್ನು ಸಚಿವರು ವಿತರಿಸಿದರು.

ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಗುಬ್ಬಿ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌ಆರ್ ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಉಪಸ್ಥಿತರಿದ್ದರು.

ಅಂಬಾರಿ ಉತ್ಸವ ಸ್ಲೀಪರ್ ಬಸ್ಸುಗಳು ಬೆಂಗಳೂರು ಮತ್ತು ಕುಂದಾಪುರ, ಮಂಗಳೂರು, ನೆಲ್ಲೂರು, ಹೈದರಾಬಾದ್, ವಿಜಯವಾಡ, ಕೋಝಿಕ್ಕೋಡ್, ತ್ರಿಶೂರ್ ಮತ್ತು ಎರ್ನಾಕುಲಂ ನಡುವೆ ಕಾರ್ಯನಿರ್ವಹಿಸಲಿವೆ.

ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಇಲ್ಲಿಯವರೆಗೆ 2,144 ಚಾಲಕರು, ಕಂಡಕ್ಟರ್‌ಗಳು ಮತ್ತು ತಾಂತ್ರಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿದೆ. ಇನ್ನುಳಿದ 6,856 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT