ಡಾ ಜಿ ಪರಮೇಶ್ವರ್  
ರಾಜ್ಯ

ಸಿ.ಟಿ ರವಿ ಕೇಸ್: ಸಭಾಪತಿಗಳು ಅನುಮತಿ ನೀಡಿದರೆ ಸ್ಥಳ ಮಹಜರು- ಗೃಹ ಸಚಿವ

ಸ್ಥಳ ಮಹಜರಿಗೆ ಪೊಲೀಸರು ಅನುಮತಿ ಕೇಳಿದ್ದಾರೆ. ಪರಿಷತ್ ಅಧ್ಯಕ್ಷರ ಅನುಮತಿ ಇಲ್ಲದೆ ಮಾಡಲಾಗುವುದಿಲ್ಲ. ಪರಿಷತ್ತಿಗೆ ತನ್ನದೇ ಆದ ನಿಯಮಗಳಿದ್ದು, ಪೊಲೀಸರು ಆ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಾರೆ.

ಬೆಂಗಳೂರು: ಸ್ಥಳ ಮಹಜರು ನಡೆಸಲು ಅನುಮತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಭಾಪತಿಗಳು ಅನುಮತಿ ಇಲ್ಲದೆ ಸದನದ ಮಹಜರು ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸೋಮವಾರ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳ ಮಹಜರಿಗೆ ಪೊಲೀಸರು ಅನುಮತಿ ಕೇಳಿದ್ದಾರೆ. ಪರಿಷತ್ ಅಧ್ಯಕ್ಷರ ಅನುಮತಿ ಇಲ್ಲದೆ ಮಾಡಲಾಗುವುದಿಲ್ಲ. ಪರಿಷತ್ತಿಗೆ ತನ್ನದೇ ಆದ ನಿಯಮಗಳಿದ್ದು, ಪೊಲೀಸರು ಆ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಪರಿಷತ್ತಿನ ನಕಲಿ ವಿಡಿಯೋಗಳ ಕುರಿತು ಸಭಾಧ್ಯಕ್ಷರು ಪೊಲೀಸರಿಗೆ ಪತ್ರ ಬರೆದಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿ, ಪೊಲೀಸರು ವಿಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಬಹುದು. ಪೊಲೀಸ್ ಅಧಿಕಾರಿಗಳು ತಮ್ಮ ಕಾರ್ಯವಿಧಾನಗಳನ್ನು ಅನುಸರಿಸಬೇಕಾಗಿರುವುದರಿಂದ ಪ್ರತಿಯೊಂದಕ್ಕೂ ಸರ್ಕಾರವನ್ನು ಕೇಳಬೇಕಾಗಿಲ್ಲ. ಪೊಲೀಸ್ ಆಯುಕ್ತರೊಂದಿಗೆ ಸಮಾಲೋಚಿಸಿ ಸ್ಥಳದಲ್ಲೇ ನಿರ್ಧಾರಗಳನ್ನು ತೆಗೆದುಕೊಂಡು ಸರ್ಕಾರ ಕೇಳಿದರೆ ವರದಿ ಸಲ್ಲಿಸಬಹುದು ಎಂದು ಹೇಳಿದರು.

ಪೊಲೀಸರು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಿರ್ದೇಶನದಂತೆ ವರ್ತಿಸುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರ ಬಳಿ ಮಾಹಿತಿಗಳಿದ್ದರೆ ನೀಡಲಿ, ಪರಿಶೀಲನೆ ಮಾಡುತ್ತೇವೆಂದು ತಿಳಿಸಿದರು.

ಇಂತಹ ಸನ್ನಿವೇಶಗಳಲ್ಲಿ ಪೊಲೀಸರು ಸಿಎಂಂ ಹಾಗೂ ಗೃಹ ಸಚಿವ ಸೂಚನೆಗಳನ್ನು ಅನುಸರಿಸುತ್ತಾರೆ. ಈ ವಿಚಾರಗಳಲ್ಲಿ ಪೊಲೀಸರು ಕೂಡ ಜವಾಬ್ದಾರರಾಗಿರುವುದರಿಂದ ಅವರು ಇತರರ ಮಾತನ್ನು ಕೇಳುವುದಿಲ್ಲ. ಇತರರ ಮಾತು ಕೇಳಿದ್ದೇ ಆದರೆ, ಅವರನ್ನು ಅವರು ಸಮರ್ಥಿಸಿಕೊಳ್ಳಬೇಕು ಎಂದರು.

ಇದೇ ವೇಳೆ ರವಿ ಎನ್ಕೌಂಟರ್ ನಡೆಸಲು ಸಂಚು ರೂಪಿಸಲಾಗಿತ್ತು ಎಂಬ ಆರೋಪವನ್ನು ಸಚಿವರು ನಿರಾಕರಿಸಿದರು. ಬಿಜೆಪಿಯ ಒಬ್ಬೊಬ್ಬರ ಹೇಳಿಕೆಗಳಿಗೆ ‌ನಾನು ಉತ್ತರ ನೀಡುವುದಿಲ್ಲ. ಈ ಬೆಳವಣಿಗೆಯಲ್ಲಿ ಎನ್‌ಕೌಂಟರ್ ಮಾಡುವ ವಿಚಾರವೇ ಇಲ್ಲ. ನನ್ನ ಪರಿಮಿತಿಯಲ್ಲಿ ಅಂತಹ ಎನ್ ಕೌಂಟರ್ ಯಾವುದು ಇಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಎರಡು ಮಾತು ಜೋರಾಗಿ ಆಡಿರಬಹುದು. ಆದರೆ ಅವರ ಕೈವಾಡ ಇದೆ ಎನ್ನುವುದು ನೀವು ಅವರನ್ನೇ ಕೇಳಿ. ಅವರ ಹೇಳಿಕೆಗೆ ನನ್ನ ಸಮರ್ಥನೆ ಕೇಳಿದರೆ ಸಿಗಲ್ಲ. ನಮ್ಮ‌ ಇಲಾಖೆಯಲ್ಲಿ ಯಾರು ಹಸ್ತಕ್ಷೇಪ ಮಾಡಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಫ್ರಿಕಾದಲ್ಲಿ ಮತ್ತೊಂದು ದಂಗೆ: ಬೆನಿನ್ ಅಧ್ಯಕ್ಷನ ಪದಚ್ಯುತಿ, ಆಡಳಿತ ಮಿಲಿಟರಿ ವಶಕ್ಕೆ, TV ಯಲ್ಲಿ ಕಾಣಿಸಿಕೊಂಡ ಸೈನಿಕರು ಮಾಡಿದ್ದೇನು?

ದಂಪತಿಗಳು ಒಂದು ಅಥವಾ ಎರಡು ಮಕ್ಕಳ ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

610 ಕೋಟಿ ರೂ. ವಾಪಸ್: ಆರು ದಿನಗಳ ಇಂಡಿಗೋ ವಿಮಾನ ರದ್ದತಿ ಅವ್ಯವಸ್ಥೆ ಬಳಿಕ ಪ್ರಯಾಣಿಕರಿಗೆ ರೀಫಂಡ್!

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

ಕಲಬುರಗಿ: ಅನ್ನದಾತರ ಸಮಸ್ಯೆ ಮುಂದಿಟ್ಟು,'ಪ್ರಿಯಾಂಕ್ ಖರ್ಗೆ ತವರಿ'ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

SCROLL FOR NEXT