ಡ್ರೋನ್ ಪ್ರತಾಪ್ 
ರಾಜ್ಯ

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು!

ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಮಧುಗಿರಿ: ಮಧುಗಿರಿ ತಾಲೂಕಿನಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ನ್ಯಾಯಾಲಯದಿಂದ ಜಾಮೀನು ದೊರಕಿದೆ. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಇಂದು ಅವರು ಜೈಲಿನಿಂದ ಹೊರಗೆ ಬರುವ ಸಾಧ್ಯತೆಯಿದೆ.

ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಈಗ ಅವರಿಗೆ ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಜಾಮೀನು ನೀಡಿದೆ.

ಏನಿದು ಪ್ರಕರಣ: ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟದ ಪ್ರಯೋಗ ಮಾಡಿದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಡ್ರೋನ್ ಪ್ರತಾಪ್ ಅಪ್ಲೋಡ್‌ ಮಾಡಿದ್ದರು. ಈ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಡ್ರೋನ್‌ ಪ್ರತಾಪ್‌ನನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದರು.

ಡ್ರೋನ್ ಪ್ರತಾಪ್ ವಿರುದ್ಧ ಬಿಎನ್​ಎಸ್​ ಸೆಕ್ಷನ್ 288 ಹಾಗೂ ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಡಿಸೆಂಬರ್​ 12ರಂದು ಅವರನ್ನು ಬಂಧಿಸಲಾಗಿತ್ತು. ನಂತರ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಬಳಿಕ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಡಿಸೆಂಬರ್​ 26ರ ತನಕ ಅವರು ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿತ್ತು. ಆದರೆ ಈಗ ಜಾಮೀನು ಮಂಜೂರು ಆಗಿರುವುದರಿಂದ ಬಿಡುಗಡೆ ಭಾಗ್ಯ ಸಿಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ವಿರಾಟ್ ಕೊಹ್ಲಿ ಇದ್ದಿದ್ದರೆ ಫಲಿತಾಂಶ ಬೇರೆಯೇ ಆಗಿರುತ್ತಿತ್ತು'; ಗೌತಮ್ ಗಂಭೀರ್ ವಿರುದ್ಧ ಪಾಕ್ ಅನುಭವಿ ಆಟಗಾರ ಅಹ್ಮದ್ ಶೆಹಜಾದ್ ವಾಗ್ದಾಳಿ

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

SCROLL FOR NEXT