ಸಾಂದರ್ಭಿಕ ಚಿತ್ರ 
ರಾಜ್ಯ

ಸಾಪ್ಟ್ ವೇರ್ ಕಂಪನಿ ಮಹಿಳಾ ಉದ್ಯೋಗಿಗೆ 58 ಲಕ್ಷ ರೂ ವಂಚನೆ; ನಾಲ್ವರು CA ಇಂಟರ್ನ್ ಗಳು ಸೇರಿ ಆರು ಮಂದಿ ಬಂಧನ

ಆರೋಪಿಗಳು ವಾಟ್ಸಾಪ್‌ನಲ್ಲಿ ಕಂಪನಿಯ ಲೋಗೋ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕರ ವಾಟ್ಸಾಪ್ ಪ್ರೊಫೈಲ್ ಚಿತ್ರವನ್ನು ಬಳಸಿಕೊಂಡು 50 ವರ್ಷದ ಹಿರಿಯ ಅಕೌಂಟೆಂಟ್ ಮಹಿಳೆಯಿಂದ ರೂ. 58 ಲಕ್ಷ ರೂ.ಗಳನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

ಬೆಂಗಳೂರು: ಸಾಫ್ಟ್‌ವೇರ್ ಕಂಪನಿಯೊಂದರ ಮಹಿಳಾ ಉದ್ಯೋಗಿಯನ್ನು ವಂಚಿಸಿದ ಆರೋಪದ ಮೇಲೆ ನಾಲ್ಕು ಚಾರ್ಟರ್ಡ್ ಅಕೌಂಟೆಂಟ್ (CA) ಇಂಟರ್ನ್ ಗಳು ಸೇರಿದಂತೆ ಆರು ಜನರನ್ನು ಆಗ್ನೇಯ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ವಾಟ್ಸಾಪ್‌ನಲ್ಲಿ ಕಂಪನಿಯ ಲೋಗೋ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕರ ವಾಟ್ಸಾಪ್ ಪ್ರೊಫೈಲ್ ಚಿತ್ರವನ್ನು ಬಳಸಿಕೊಂಡು 50 ವರ್ಷದ ಹಿರಿಯ ಅಕೌಂಟೆಂಟ್ ಮಹಿಳೆಯಿಂದ ರೂ. 58 ಲಕ್ಷ ರೂ.ಗಳನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

ಆರೋಪಿಗಳನ್ನು ಗ್ರೀಷ್ಮಾ (23), ಎನ್ ದಿನೇಶ್ (24), ಹರ್ಷಿತ್ ಎಂ ಎಸ್ (23) ಮತ್ತು ಪವನ್ ಕುಮಾರ್ (24) ಎಂದು ಗುರುತಿಸಲಾಗಿದೆ. ಇವರೆಲ್ಲಾರೂ ಎಲ್ಲಾ ಸಿಎ ಇಂಟರ್ನ್ ಗಳು ಮತ್ತು ಸಹಪಾಠಿಗಳು. ಇತರ ಆರೋಪಿಗಳಾದ ಎನ್ ಸಾಯಿಕುಮಾರ್ (23) ಮತ್ತು ರವಿತೇಜ (32) ಅವರು ಹಲವಾರು ಚಲನಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಡಿಸೆಂಬರ್ 3 ರಂದು ಬಿಟಿಎಂ ಲೇಔಟ್‌ನಲ್ಲಿರುವ ಸಾಫ್ಟ್‌ವೇರ್ ಕಂಪನಿಯ ಅಕೌಂಟೆಂಟ್‌ಗೆ ಕಂಪನಿಯ ಲೋಗೋ ಮತ್ತು ಎಂಡಿ ಫೋಟೋವಿರುವ ನಂಬರ್‌ನಿಂದ ವಾಟ್ಸಾಪ್ ಮೇಸೆಜ್ ಬಂದಿದೆ. ಅಧರಲ್ಲಿ ಸಂತ್ರಸ್ತರಿಗೆ ಕಂಪನಿಯ ಪ್ರಾಜೆಕ್ಟ್‌ಗಾಗಿ ಮುಂಗಡ ಭದ್ರತಾ ಠೇವಣಿಯಾಗಿ 56,001,00 ರೂಗಳನ್ನು ವರ್ಗಾಯಿಸುವಂತೆ ಸೂಚಿಸಲಾಗಿದೆ. ಎಂಡಿ ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿದ್ದು, ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ಮೇಸೆಜ್ ಮಾಡಲಾಗಿದೆ. ಇದನ್ನು ನಂಬಿದ ಸಂತ್ರಸ್ತೆ

ಮೇಸೆಜ್ ನಲ್ಲಿ ನೀಡಲಾದ ಬ್ಯಾಂಕ್ ಖಾತೆ ವಿವರಗಳಿಗೆ ಹಣವನ್ನು ವರ್ಗಾಯಿಸಿದ್ದಾರೆ. ಬಳಿಕ ಎಂಡಿಯೊಂದಿಗೆ ಮಾತನಾಡಿದ ಬಳಿಕ ವಂಚನೆಗೊಳಗಾಗಿರುವುದು ತಿಳಿದುಬಂದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

ಶಂಕಿತನನ್ನು ಹೈದರಬಾದಿನಲ್ಲಿ ಪೊಲೀಸರು ಬಂಧಿಸಿದ ನಂತರ ಈ ದಂಧೆಯಲ್ಲಿ ಇತರ ಐವರು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳು ಹಣವನ್ನು ಹಿಂಪಡೆದು ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆ ಮಾಡಿದ್ದಾರೆ, ಸಂತ್ರಸ್ತೆ ಮತ್ತು ಆರೋಪಿಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಿಂಗ್‌ಪಿನ್ ಇನ್ನೂ ಪತ್ತೆಯಾಗಿಲ್ಲ.ಆರೋಪಿಗಳಿಂದ ಹೊಚ್ಚಹೊಸ ಐಷಾರಾಮಿ ಕಾರು ಹಾಗೂ 58,600 ರೂ.ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದೇಶ ಹಿಂಸಾಚಾರ: ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ: ICT ತೀರ್ಪು

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರ ರಾಜ್ಯಪಾಲ ಆರಿಫ್ ಖಾನ್ ಭೇಟಿಯಾದ ನಿತೀಶ್ ಕುಮಾರ್

Congo copper mine: ಕಾಂಗೋದಲ್ಲಿ ಭೀಕರ ಗಣಿ ಅವಘಡ, ಭೂ ಕುಸಿತದಲ್ಲಿ ಕನಿಷ್ಟ 80 ಮಂದಿ ಸಾವು! Video

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

SCROLL FOR NEXT