ಶಾಸಕ ಮುನಿರತ್ನ 
ರಾಜ್ಯ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ, ಹಲ್ಲೆ ಆರೋಪ

ಘಟನೆಗೆ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ, ನನ್ನನ್ನು ಕೊಲೆ ಮಾಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ಜಾತಿನಿಂದನೆ ಹಾಗೂ ಲೈಂಗಿಕ ಅತ್ಯಾಚಾರ ಪ್ರಕರಣದಲ್ಲಿ ಇತ್ತೀಚಿಗೆ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಂದಿನಿ ಲೇಔಟ್ ನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ. ಬಳಿಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಕಂಠೀರವ ಸ್ಟೇಡಿಯಂ ಬಳಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಕಾಂಗ್ರೆಸ್ ಬೆಂಬಲಿಗರು ಕೂಡಾ ಪ್ರತಿಭಟನೆ ನಡೆಸಿದ್ದು, ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡುವೆ ಗಲಾಟೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಕಾರು ಜಖಂಗೊಳಿಸಿರುವ ಆರೋಪವೂ ಕೇಳಿಬಂದಿದೆ. ಪ್ರತಿಭಟನೆ ವೇಳೆಯಲ್ಲಿ 2-3 ಕಾರುಗಳ ಜಖಂಗೊಂಡಿದ್ದು, ಕೆಲ ಮಂದಿಗೆ ಹಲ್ಲೆಯಾಗಿದೆ ಎನ್ನಲಾಗಿದೆ.

ಸ್ಥಳಕ್ಕೆ ನಂದಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾಂಗ್ರೆಸ್ ಮುಖಂಡರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ, ನನ್ನನ್ನು ಕೊಲೆ ಮಾಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಮಧ್ಯೆ ಘಟನೆಯನ್ನು ಖಂಡಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ, ಮುನಿರತ್ನ ಮೇಲೆ ಹಲ್ಲೆಯಾಗಿದೆ. ಗುಂಡಾಗಳ ಮೂಲಕ ಹಲ್ಲೆ ನಡೆಸಲಾಗಿದೆ. ಗುಂಡಾ ರಾಜ್ಯವಾಗಲು ಬಿಡಲು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಮಧ್ಯೆ ಘಟನೆಯನ್ನು ಖಂಡಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ, ಮುನಿರತ್ನ ಮೇಲೆ ಹಲ್ಲೆಯಾಗಿದೆ. ಗುಂಡಾಗಳ ಮೂಲಕ ಹಲ್ಲೆ ನಡೆಸಲಾಗಿದೆ. ಗುಂಡಾ ರಾಜ್ಯವಾಗಲು ಬಿಡಲು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT