ಸಿಎಂ ಸಿದ್ದರಾಮಯ್ಯ 
ರಾಜ್ಯ

ಮೈಸೂರಿನ ಪ್ರಮುಖ ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಮಹಾನಗರ ಪಾಲಿಕೆ ತೀರ್ಮಾನ; ತೀವ್ರ ಆಕ್ಷೇಪ!

ಕೌನ್ಸಿಲ್ ಸಭೆಯಲ್ಲಿ ಮಂಡನೆಯಾಗುವ ಮೊದಲು ಮೈಸೂರು ಜಿಲ್ಲಾಧಿಕಾರಿ ಮುಂದೆ ವಿಷಯ ಮಂಡಿಸಲಾಗಿದೆ.

ಮೈಸೂರು: ಮೈಸೂರಿನ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಮಹಾನಗರ ಪಾಲಿಕೆ ಪ್ರಸ್ತಾವನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಅಧಿಕೃತ ಮೂಲಗಳ ಪ್ರಕಾರ, ಕೆಆರ್‌ಎಸ್ ರಸ್ತೆಯ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಹೊರವರ್ತುಲ ರಸ್ತೆ ಜಂಕ್ಷನ್‌ವರೆಗಿನ ರಸ್ತೆಯನ್ನು ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಲು ಪ್ರಸ್ತಾಪಿಸಲಾಗಿದೆ. ಚಾಮರಾಜ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರ ಸಲಹೆಯನ್ನು ಆಧರಿಸಿ, ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ನವೆಂಬರ್ 22 ರಂದು ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಕೌನ್ಸಿಲ್ ಸಭೆಯಲ್ಲಿ ಮಂಡನೆಯಾಗುವ ಮೊದಲು ಮೈಸೂರು ಜಿಲ್ಲಾಧಿಕಾರಿ ಮುಂದೆ ವಿಷಯ ಮಂಡಿಸಲಾಗಿದೆ. ನಂತರ ಎಂಸಿಸಿ ಡಿಸೆಂಬರ್ 13 ರಂದು 30 ದಿನಗಳಲ್ಲಿ ಪ್ರಸ್ತಾವನೆಯ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸುವ ಪ್ರಕಟಣೆ ನೀಡಿದೆ.

ಮೈಸೂರು ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿದೆ. ಮೈಸೂರಿನ ಐತಿಹಾಸಿಕ ನಗರಿ ಕೆಆರ್‌ಎಸ್‌ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ಕ್ರಮ ಖಂಡನೀಯ ಎಂದು ಜೆಡಿಎಸ್‌ ಹೇಳಿದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ಆರೋಪಿಯಾಗಿದ್ದು, ಲೋಕಾಯುಕ್ತ ಪೊಲೀಸರಿಂದ ತನಿಖೆ ಎದುರಿಸುತ್ತಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಮಂಡಳಿ ಇಲ್ಲ. ಕಾಂಗ್ರೆಸ್ ಸರ್ಕಾರ ನೇಮಿಸಿದ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಋಣಿಯಾಗಿರುವುದರಿಂದ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡಲು ನಿರ್ಧರಿಸಿದ್ದಾರೆ. ಮುಡಾ ಹಗರಣದಲ್ಲಿ ಭಾಗಿಯಾಗಿರುವ ‘ಭ್ರಷ್ಟ’ ಮುಖ್ಯಮಂತ್ರಿಯ ಹೆಸರನ್ನು ರಸ್ತೆಗೆ ಹೆಸರಿಸಿರುವುದು ಐತಿಹಾಸಿಕ ಮೈಸೂರಿಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಮಾಡಿದ ದ್ರೋಹ ಮತ್ತು ಅವಮಾನ’ ಎಂದು ಜೆಡಿಎಸ್ ಆರೋಪಿಸಿದೆ.

ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಗರಣದ ದೂರು ದಾಖಲಿಸಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸೇರಿದಂತೆ ಹಲವು ನಾಗರಿಕರು ಕೂಡಾ ಮಹಾನಗರ ಪಾಲಿಕೆ ಪ್ರಸ್ತಾವವನ್ನು ವಿರೋಧಿಸಿದ್ದಾರೆ. ಈ ಪ್ರಸ್ತಾವವನ್ನು ಕೈಬಿಡದಿದ್ದರೆ ಹೈಕೋರ್ಟ್ ನಲ್ಲಿ ಹೋರಾಟ ನಡೆಸಲಾಗುವುದು ಎಂದು ಸ್ನೇಹಮಯಿ ಕೃಷ್ಣ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT