ಸಾಂದರ್ಭಿಕ ಚಿತ್ರ 
ರಾಜ್ಯ

Chitradurga: ಒಳಚರಂಡಿ ದುರಸ್ತಿ ವೇಳೆ ಉಸಿರುಗಟ್ಟಿ ಕಾರ್ಮಿಕ ಸಾವು!

ಮೂಲಗಳ ಪ್ರಕಾರ ಒಳಚರಂಡಿ ಕಟ್ಟಿಕೊಂಡಿದ್ದರಿಂದ ರಾಘವೇಂದ್ರ ಕಲ್ಯಾಣ ಮಂಟಪದ ಮಾಲೀಕ ಅದರ ದುರಸ್ತಿಗಾಗಿ ರಂಗಸ್ವಾಮಿಯನ್ನು ಕರೆಸಿದ್ದರು.

ಚಿತ್ರದುರ್ಗ: ಒಳಚರಂಡಿ ದುರಸ್ತಿ ಕಾರ್ಮಿಕ ಉಸಿರುಗಟ್ಟಿ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಡಿಸೆಂಬರ್ 18ರಂದು ನಡೆದಿದ್ದ ದುರ್ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಕಾರ್ಮಿಕನನ್ನು ಚಳ್ಳಕೆರೆಯ ಗಾಂಧಿನಗರ ಬಡಾವಣೆಯ ರಂಗಸ್ವಾಮಿ (48) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಒಳಚರಂಡಿ ಕಟ್ಟಿಕೊಂಡಿದ್ದರಿಂದ ರಾಘವೇಂದ್ರ ಕಲ್ಯಾಣ ಮಂಟಪದ ಮಾಲೀಕ ಅದರ ದುರಸ್ತಿಗಾಗಿ ರಂಗಸ್ವಾಮಿಯನ್ನು ಕರೆಸಿದ್ದರು. ಆದರೆ ದುರಸ್ತಿಗಾಗಿ ಒಳಚರಂಡಿಗೆ ಇಳಿದ ಆತ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ಆರಂಭದಲ್ಲಿ ಆತ ನೀರಿನ ತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಎಂದು ಹೇಳಲಾಗಿತ್ತು. ಆದರೆ ಬಳಿಕ ಸಫಾಯಿ ಕರ್ಮಚಾರಿಗಳ ಸೇವಾ ಸಮಿತಿ ಈ ಬಗ್ಗೆ ಡಿಸಿ ಕಚೇರಿಗೆ ದೂರು ಸಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ದೂರು ಆಧರಿಸಿ ನಗರಸಭೆ ಕಂದಾಯ ನಿರೀಕ್ಷಕ ಗುರುಪ್ರಸಾದ್ ಸ್ಥಳ ಪರಿಶೀಲನೆ ನಡೆಸಿದಾಗ ರಂಗಸ್ವಾಮಿ ಉಸಿರುಗಟ್ಟಿ ಸಾವನ್ನಪ್ಪಿರುವುದು ಸ್ಪಷ್ಟವಾಗಿದೆ. ಇದೀಗ ಕಲ್ಯಾಣ ಮಂಟಪದ ಮಾಲೀಕ ಗುರುವೀರ ನಾಯಕ್ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಗೆ ನಗರಸಭೆ ಅಧಿಕಾರಿ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT