ಪ್ರಿಯಾಂಕ್ ಖರ್ಗೆ-ರಾಜು ಕಪನೂರು-ಸಚಿನ್ 
ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ 1 ಕೋಟಿ ರೂ ಹಣಕ್ಕಾಗಿ ಬೇಡಿಕೆ, ಕೊಲೆ ಬೆದರಿಕೆ: ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ!

15 ಲಕ್ಷ ರೂಪಾಯಿ ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಅಲ್ಲದೆ 1 ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದು ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿನ್ ಆರೋಪಿಸಿದ್ದಾನೆ.

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ, ಕೊಲೆ ಬೆದರಿಕೆಯಂತ ಗಂಭೀರ ಆರೋಪಗಳನ್ನು ಮಾಡಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. 26 ವರ್ಷದ ಸಚಿನ್ 7 ಪುಟಗಳ ಡೆತ್​ನೋಟ್​ ಬರೆದಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್​ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಡೆತ್​ ನೋಟ್​ನಲ್ಲಿ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ, ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ. 15 ಲಕ್ಷ ರೂಪಾಯಿ ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಅಲ್ಲದೆ 1 ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದು ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿನ್ ಆರೋಪಿಸಿದ್ದಾನೆ. ಸದ್ಯ ಪೊಲೀಸರು ಸಚಿನ್ ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಈ ಸಂಬಂಧ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೆತ್ ನೋಟ್​ನಲ್ಲಿ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. ಈ ಹಿಂದೆ ಬೆಳಗಾವಿಯ ಗುತ್ತಿಗೆದಾರ ಸಂತೋಷ್​ ಎಂಬುವರು ಸಹ ಅಂದಿನ ಸಚಿವ ಕೆಎಸ್ ಈಶ್ವರಪ್ಪ ಅವರ ಹೆಸರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪ ಅವರು ರಾಜೀನಾಮೆ ಕೊಡಬೇಕಾಗಿ ಬಂತು. ಇದೀಗ ಬೀದರ್​ನಲ್ಲಿ ಸಚಿನ್ ಆತ್ಮಹತ್ಯೆಯಲ್ಲಿ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಪ್ರಿಯಾಂಕ್ ಖರ್ಗೆ ಸ್ಪಷ್ಟನೆ:

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!