ಬಂಧಿತ ಆರೋಪಿಗಳು 
ರಾಜ್ಯ

ದಾವಣಗೆರೆ ಅರಣ್ಯ ವಲಯದಲ್ಲಿ 32 ಜೀವಂತ ನಾಡಬಾಂಬ್ ಪತ್ತೆ: ಇಬ್ಬರ ಬಂಧನ

ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ನಾಡಬಾಂಬ್ ಪತ್ತೆ ಆಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ ಬರ್ಕತ್ ಅವರು ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದಾವಣಗೆರೆ: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ಜೀವಂತ ನಾಡಬಾಂಬ್​ಗಳು ಪತ್ತೆ ಆಗಿವೆ.

ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ನಾಡಬಾಂಬ್ ಪತ್ತೆ ಆಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ ಬರ್ಕತ್ ಅವರು ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಡು ಪ್ರಾಣಿಗಳ ಬೇಟೆಗಾಗಿ ನಾಲ್ವರು ದುಷ್ಕರ್ಮಿಗಳು ನಾಡಬಾಂಬ್​ ಇಟ್ಟಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳನ್ನ ಕಂಡು ಎರಡು ಬೈಕ್ ಬಿಟ್ಟು ನಾಲ್ವರು ಪರಾರಿ ಆಗಿದ್ದಾರೆ.

ಗಸ್ತು ತಿರುಗುತ್ತಿದ್ದಾಗ ರಸ್ತೆ ಬದಿ ಎರಡು ಬೈಕ್​ಗಳನ್ನು ಅರಣ್ಯ ಸಿಬ್ಬಂದಿಗಳು ನೋಡಿದ್ದಾರೆ. ಅನುಮಾನಗೊಂಡು ಕಾಡಿನೊಳಗೆ ಹೋದಾಗ ಬಾಂಬ್ ಇಡಲು ನಾಲ್ವರು ಸ್ಕೆಚ್ ಹಾಕಿರುವುದು ತಿಳಿದುಬಂದಿದೆ.

ಬಾಂಬ್ ಇಡಲು ಬಂದಿದ್ದ ನಾಲ್ವರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು, ಮಾದಾಪುರ ಗ್ರಾಮದ ತಿಮ್ಮಪ್ಪ ಮತ್ತು ಗುಡ್ಡಪ್ಪ ಎಂದು ತಿಳಿದುಬಂದಿದೆ. ಇಬ್ಬರನ್ನು ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಜೈಲಿಗಟ್ಟಿದ್ದಾರೆ.

ಇನ್ನು ಉಳಿದ ಇಬ್ಬರ ಮಾಹಿತಿಯನ್ನು ನ್ಯಾಮತಿ ಪೊಲೀಸರು ಕಲೆ ಹಾಕುತ್ತಿದ್ದಾರೆ. ಈ ಹಿಂದೆಯೂ ಆರೋಪಿಗಳು ಇದೇ ಅರಣ್ಯದಲ್ಲಿ ನಾಡಬಾಂಬ್ ಇಟ್ಟಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT